| ಕನ್ನಡ ಸಾಹಿತ್ಯ.ಕಾಂ | |
| ಕನ್ನಡದ ಕಣ್ಣಲ್ಲಿ ವಿಶ್ವದ ಕನಸು | |
| ಬಾನಿನೊಂದೆಡೆ ತಮದ ರುಂದ್ರ ಪಾತ್ರೆಯಲಿಳಿದು | |
| ದೀನ ಮೊಗದಲಿ ಕಿರಣ ತಾನ ಸೋಪಾನದಲಿ | |
| ನಿರ್ನಿಮೇಷಾಕ್ಷಿಯೊಳಗೇನನೀಕ್ಷಿಸುತಿರುವೆ ಲಲಿತಾಂಗಿ ನಕ್ಷತ್ರವೆ? | |
| ಉನ್ನತದ ತಾರಕಿತ ಗಗನದೊಳು ಏಕಾಕಿ | |
| ಬಿನ್ನಗಾಗುತ ಮೌನವ್ರತಧಾರಿಯಾಗಿರಲು | |
| ಪನ್ನತಿಕೆ ಬಹುದೆಂದು? ಎದ ಭಾರವನು ಇಳುಹಲಾರದೆಯೆ ಕೊರಗುತಿರುವೆ! | |
| ಭವದ ಬಾಳಿನೊಳಿಲ್ಲಿ ದಿವದ ಕನಸನು ಕಂಡು | |
| ಜೀವನದ ಪಾವನಂಗೊಳಿಪ ಹಂಬಲದೊಳಿರೆ | |
| ಆವ ನೋವಿನ ಕಾವು ಕೆಂಗುಲಿಮೆಯಲಿ ಕುದಿಸಿ ನಿನ್ನ ದಿಗ್ಬಲಿ ಹೊಡೆಯಿತೊ! ಭಾವುಕರಿಗಾತ್ಮಾಭಿರಾಮ ಧೀಮಂತರಿಗೆ | |
| ನೋವಿನೊಡ ಹುಟ್ಟಿ ಮೃದು ಹೂವಾಗಿ ಪ್ರೇಮದಲಿ | |
| ನವೆದ ಸತ್ಯಾಶ್ರಯರಿಗೀ ಜಗದೊಳುಳಿಗಾಲ ಬೆಳೆಗಾಲವಿಲ್ಲವೇನೊ! | |
| ನೊಂದವರ ಕಣ್ಣೀರ ಬಿಂದುಬಿಂದುವು ಜಿನುಗಿ | |
| ಕುಂದದಮರ ಪ್ರೇಮ ಬಾನಾಳ್ಮೆಯಲಿ ಮಿನುಗಿ- | |
| ಅಂದಗೆಟ್ಟಿಹ ಬಾಳೊಳಾವ ಸಂದೇಶವನು ತಂದಿರುವೆ ಕಿರುತಾರಗೆ? | |
| ಅಂಧಕಾರವು ಕಣ್ಣ ತಿವಿದು ನಿನ್ನದಗುದಿಗೆ | |
| ಇಂಧನವನೊಟ್ಟಿ ಹಸಿ ಹೆಣವ ಬೇಯಿಸುತಲಿದೆ! | |
| ಬಂಧಮುಕ್ತಿಯ ಪಡೆದ ಚೊಕ್ಕ ಬೆಳಕಿನ ಚಿಕ್ಕೆ ಮುಂದಾವ ಗುರಿಯು ನಿನಗೆ? | |
| ***** | |
| ನಡುವಗಲ ಪೊಳ್ತು; ಬೆಂಬಿಸಿಲಾಳುತಿದೆ ಜಗವ. ಗಿರಿಸಾನು ಪೇರಡವಿ ದಿಙ್ಮೂಢವಾಗಿಹವು; ಬೇಲಿಪೊದ ಸಾಲಿನಲಿ ಕೀಟಗಳ ನಸು ಸುಳಿವು; ಮೇಲೆ ನೀಲಾಂಬರದಿ ನುಸುಳಿ ಮಲ್ಲಡಿಯಿಡುವ ತೇಲು-ಮೋಡದ ಕೂಸು; ಹುಲ್ಲುಗಾವಲದಲ್ಲಿ ಹೆಸರಿರದ ಚಿತ್ರಮಯ ಹೂಗಳೊಡನಾಡುತಿದೆ ಏಕಾಂಗಿ ಚಿಟ್ಟೆ; ಅಲುಗುತ್ತಿವ […] | |
| ಕುರಿಗಳು, ಸಾರ್, ಕುರಿಗಳು ಕುರಿಗಳು, ಸಾರ್, ಕುರಿಗಳು ಕುರಿಗಳು, ಸಾರ್, ಕುರಿಗಳು: ಸಾಗಿದ್ದೇ ಗುರಿಗಳು. ಮಂದೆಯಲ್ಲಿ ಒಂದಾಗಿ, ಸ್ವಂತತೆಯೇ ಬಂದಾಗಿ ಇದರ ಬಾಲ ಅದು, ಮತ್ತೆ ಅದರ ಬಾಲ ಇದು ಮೂಸಿ ದನಿ ಕುಗ್ಗಿಸಿ, […] | |
| ಇರುಳು ನಕ್ಷತ್ರ ಮಿನುಗುತ್ತವೆ- ಎಂದರೆ, ಬೆಳಕು ಬಾಯ್ಬಿಟ್ಟು, ತುಟಿಗೆ ತುಟಿ ಹಚ್ಚದೆ ಮಾತಾಡಿಕೊಳ್ಳುತ್ತವೆ. ಕವಿತೆ ಕಿವಿಗೊಟ್ಟು ಕೇಳುತ್ತದೆ. ಮಂದ ಬೆಳಕಿನಲ್ಲಿ ಗಿರಿ ಶಿಖರ ಗಿರಿಗಿರಿ ಬುಗುರಿಯಾಡಿ ಇದ್ದಲ್ಲೆ ನಿದ್ದೆ ಹೋಗುತ್ತವೆ. ಗಿಡಮರಗಳು ಆಕಾಶದಲ್ಲಿ ಬೇಕಾದ […] | |
| ಬಿಟ್ಟ್ಯಾ | |
| ಬಿಟ್ಟ್ಯಾ ತನ್ನ ಹಳ್ಳೀ ಬಿಟ್ಟು ಒ೦ದೇ ಸಮನೇ ಓಡುತ್ತಿದ್ದ. ಎಲ್ಲಿಗೆ ಅಂತಲೂ ಗೊತ್ತಿಲ್ಲ; ಯಾಕಂತಲೂ ಗೊತ್ತಿಲ್ಲ. ಅದೆಷ್ಟು ಹೊತ್ತು ಓಡಿದನೋ! ಇನ್ನೊಂದು ಊರು ಸೇರೋ ವರೆಗೂ ಓಡಿದ.… ಮುಂದೆ ಓದಿ… | |
| ಟಿಪ್ಸ್ ಸುತ್ತ ಮುತ್ತ | |
| "ಕಾಫಿಗೆ ಬರ್ತಿಯೇನೊ?" ಪರಿಚಯವಾಗಿ, ಸ್ನೇಹವಾಗಿ, ಸಲಿಗೆಯಾಗಿ ಒಂದು ತಿಂಗಳಷ್ಟೆ ಆಗಿತ್ತು. ಮುಕ್ತ ಸಲಿಗೆಯಿಂದ ಅವನು ಉತ್ತರ ಕೊಟ್ಟ. "ಕಾಸಿಲ್ಲ ಕೊಡಿಸ್ತೀಯ?" "ಬಾ ಹೋಗೋಣ..." -ಹೊರಗಡೆ ಸಣ್ಣದಾಗಿ ಮಳೆ.… ಮುಂದೆ ಓದಿ… | |
| ಮನ್ನಿ | |
| ನನಗೆ ಆ ಕಿಟಕಿಯೆಂದರೆ ಬಲು ಪ್ರೀತಿ.ಐ ಲವ್ ಇಟ್ , ಜಸ್ಟ್ ಸಿಂಪ್ಲಿ ಐ ಲವ್ ಇಟ್. ಕ್ಷಮಿಸಿ, ಗೋಕಾಕ್ ಚಳವಳಿಯನಂತರ ಸರ್ಕಾರ ಎಲ್ಲಾ ಹಂತಗಳಲ್ಲೂ ಕನ್ನಡ… ಮುಂದೆ ಓದಿ… | |
| ಬುಗುರಿ | |
| ಚೆಲುವ ಕಣ್ಣು ತುಂಬ ನೀರು ತುಂಬಿಕೊಂಡು ತನ್ನ ಬುಗುರಿ ಕಕ್ಕಸು ಗುಂಡಿಗೆ ಬಿದ್ದು ಹೋಯಿತಲ್ಲಾ ಎಂದು ಸಂಕಟ ಪಡುತ್ತಾ ಹಜಾರದ ಗೋಡೆಗೆ ಒರಗಿಕೊಂಡು ಕಣ್ಣು ಮುಖವನ್ನು ಕಣ್ಣೀರಿಂದ… ಮುಂದೆ ಓದಿ… |