ಸುರಪುರ ಉಪಚುನಾವಣೆ ಫಲಿತಾಂಶ : ಕಾಂಗ್ರೆಸ್‌‍ ಅಭ್ಯರ್ಥಿ ವೇಣುಗೋಪಾಲ ನಾಯಕ್‌ ಮುನ್ನಡೆ
ಸುರಪುರ ಜೂ. 4-ಶಾಸಕ ರಾಜಾ ವೆಂಕಟಪ್ಪ ನಾಯಕ ಅವರ ನಿಧನದಿಂದ ತೆರವಾಗಿದ್ದ ಸುರಪುರ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯ ಲಿತಾಂಶದ ಮತ ಎಣಿಕೆ ಆರಂಭಗೊಂಡಿದ್ದು, ಕಾಂಗ್ರೆಸ್‌‍ ಅಭ್ಯರ್ಥಿ ರಾಜಾ ವೇಣುಗೋಪಾಲ ನಾಯಕ್‌ ಆರಂಭಿಕ ಮುನ್ನಡೆ ಕಾಯ್ದುಕೊಂಡಿದ್ದಾರೆ. ಬಿಜೆಪಿ ಅಭ್ಯರ್ಥಿ ರಾಜುಗೌಡ ಅವರು ಐದೂ ಸುತ್ತಿನಲ್ಲೂ ಹಿನ್ನಡೆ ಅನುಭವಿಸಿದ್ದಾರೆ.
ಕಾಂಗ್ರೆಸ್‌‍ ಮತ್ತು ಬಿಜೆಪಿಯ ಅಭ್ಯರ್ಥಿ ನಡುವೆ ನೇರ ಹಣಾಹಣಿ ನಡೆದಿದ್ದು, 5ನೇ ಸುತ್ತಿನ ಮತ ಏಣಿಕೆಯ ವೇಳೆಗೆ ಕಾಂಗ್ರೆಸ್‌‍ ಅಭ್ಯರ್ಥಿ ರಾಜಾ ವೇಣುಗೋಪಾಲ ನಾಯಕ್‌ ಅವರು 6000 ಮತಗಳ ಅಂತರದಿಂದ ಮುನ್ನಡೆ ಕಾಯ್ದುಕೊಂಡಿದ್ದರು.