ಭಾನುವಾರವೂ ಬಜೆಟ್ ತಯಾರಿಯಲ್ಲಿ ಸಿಎಂ ಬ್ಯುಸಿ
ಬೆಂಗಳೂರು,ಫೆ.4- ಭಾನುವಾರದ ರಜಾ ದಿನವೂ ಕೂಡ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಜೆಟ್ ತಯಾರಿಯಲ್ಲಿ ತೊಡಗಿಸಿಕೊಳ್ಳುವ ಮೂಲಕ ಗಮನ ಸೆಳೆದಿದ್ದಾರೆ. ಇಂದ ಬೆಳಗ್ಗೆ ಎಲ್ಲಾ ಕಾರ್ಯಕ್ರಮಗಳನ್ನು ಬದಿಗಿರಿಸಿ ಆರ್ಥಿಕ ಇಲಾಖೆಯ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿದ್ದಾರೆ. ರಾಜ್ಯಕ್ಕೆ ದೃಢವಾದ ಮತ್ತು ಪ್ರಗತಿ ಪರ ಬಜೆಟ್‍ನ್ನು ನೀಡುವುದು ನಮ್ಮ ಬದ್ದತೆ. ಈ ವಿಷಯವಾಗಿ ಆಳವಾದ ಅಧ್ಯಯನ ನಡೆಸಲಾಗುತ್ತಿದೆ.
ವೈಫಲ್ಯಗಳನ್ನು ಮರೆಮಾಚಲು ಕೇಂದ್ರ ರುದ್ಧ ಗೂಬೆ ಕೂರಿಸುವ ಪ್ರಯತ್ನ : ಬಿಜೆಪಿ ವಾಗ್ದಾಳಿ
ಹಿಂದಿನ ಅವಧಿಯಲ್ಲಿ ನೀಡಿದ್ದ ಭರವಸೆಗಳ ಅನುಷ್ಠಾನ ಮತ್ತು ಭವಿಷ್ಯದ ಬಜೆಟ್‍ನಲ್ಲಿ ಅಳವಡಿಸಬೇಕಾದ ಭರವಸೆಗಳ ಕುರಿತು ಚರ್ಚೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿಗಳು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.
              .       .            .##KarnatakaBudget2425pic../