ಬಿಜೆಪಿ ಜೊತೆ ಜೆಡಿಎಸ್ ವಿಲೀನವಿಲ್ಲ : ಹೆಚ್‌ಡಿಕೆ
ಬೆಂಗಳೂರು, ನ.12- ಬಿಜೆಪಿ ಜತೆ ಜೆಡಿಎಸ್ ವಿಲೀನವಿಲ್ಲ. ಎನ್‍ಡಿಎ ಮೈತ್ರಿಕೂಟದಲ್ಲಿ ಇದ್ದೇವೆ ಅಷ್ಟೇ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿ.ವೈ.ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಆಯ್ಕೆ ಮಾಡಿರುವುದು ಸ್ವಾಗತಾರ್ಹ. ನಮ್ಮ ಹೋರಾಟ ಕಾಂಗ್ರೆಸ್ ಪಕ್ಷವನ್ನು ಕಿತ್ತೊಗೆಯುವುದು. ಅದಕ್ಕಾಗಿ ಒಬ್ಬ ಯುವ ನಾಯಕನ ಅಗತ್ಯವಿತ್ತು. ಆ ಜವಾಬ್ದಾರಿಯನ್ನು ವಿಜಯೇಂದ್ರ ಅವರು ಸಮರ್ಥವಾಗಿ ನಿರ್ವಹಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಅಮಾಸ್ ಮೇಲಿನ ದಾಳಿ ನಿಲ್ಲಿಸುವ ಪ್ರಶ್ನೆಯೇ ಇಲ್ಲ ; ನೆತನ್ಯಾಹು
ಶೀಘ್ರದಲ್ಲೇ ವಿಪಕ್ಷ ನಾಯಕನ ಆಯ್ಕೆಯೂ ಆಗಬಹುದು. ಒಕ್ಕಲಿಗ ಲಿಂಗಾಯಿತ ಸಮೀಕರಣ ಎನ್ನುವುದಕ್ಕಿಂತ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟ ಮಾಡುವುದೇ ನಮ್ಮ ಉದ್ದೇಶ ಎಂದರು.