ಗೌತಮ್ ಅದಾನಿಗೆ ಸುಪ್ರೀಂ ಕೋರ್ಟ್ ರಿಲೀಫ್
ನವದೆಹಲಿ,ಜ.3- ಹಿಂಡೆನ್‍ಬರ್ಗ್ ಪ್ರಕರಣ ಕುರಿತಂತೆ ದೇಶದ ಕೋಟ್ಯಾಪತಿ ಗೌತಮ್ ಅದಾನಿ ಅವರಿಗೆ ಸುಪ್ರೀಂ ಕೋರ್ಟ್ ರಿಲೀಫ್ ನೀಡಿದೆ. ಹಿಂಡೆನ್‍ಬರ್ಗ್ ಪ್ರಕರಣದ ಕುರಿತು ಬಂಡವಾಳ ಮಾರುಕಟ್ಟೆ ನಿಯಂತ್ರಕ ಸೆಬಿಯ ತನಿಖೆಯನ್ನು ಅನುಮಾನಿಸಲು ಜಾರ್ಜ್ ಸೊರೊಸ್ ನೇತೃತ್ವದ ಒಸಿಸಿಆರ್‌ಪಿ ವರದಿಯು ಆಧಾರವಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.
ತೀರ್ಪು ಪ್ರಕಟಿಸಿದ ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರಿದ್ದ ಸುಪ್ರೀಂ ಕೋರ್ಟ್ ಪೀಠವು ತನಿಖೆಯನ್ನು ವಿಶೇಷ ತನಿಖಾ ತಂಡಕ್ಕೆ ವರ್ಗಾಯಿಸಲು ಯಾವುದೇ ಆಧಾರಗಳಿಲ್ಲ ಎಂದು ಹೇಳಿದೆ.
ಪಿಎಂ ವಿಶ್ವಕರ್ಯ ಯೋಜನೆ ಜಾರಿಗೆ ತಂದ ಮೊದಲ ರಾಜ್ಯ ಕಾಶ್ಮೀರ
ಸೆಕ್ಯುರಿಟೀಸ್ ಅಂಡ್ ಎಕ್ಸ್‍ಚೇಂಜ್ ಬೋರ್ಡ್ ಆಫ್ ಇಂಡಿಯಾ (ಸೆಬಿ) ಅಮೆರಿಕ ಮೂಲದ ಕಿರು ಮಾರಾಟಗಾರ ಹಿಂಡೆನ್‍ಬರ್ಗ್ ರಿಸರ್ಚ್‍ನ ಆರೋಪಗಳಿಗೆ ಸಂಬಂಧಿಸಿದ 24 ಪ್ರಕರಣಗಳಲ್ಲಿ 22 ಪ್ರಕರಣಗಳನ್ನು ತನಿಖೆ ಮಾಡಿದೆ. ಉಳಿದ ಎರಡು ಪ್ರಕರಣಗಳ ತನಿಖೆಯನ್ನು ಪೂರ್ಣಗೊಳಿಸಲು ಸುಪ್ರೀಂ ಕೋರ್ಟ್ ಸೆಬಿಗೆ ಮೂರು ತಿಂಗಳ ಕಾಲಾವಕಾಶ ನೀಡಿದೆ.
ಹಿಂಡೆನ್‍ಬರ್ಗ್ ಮಾರುಕಟ್ಟೆಯನ್ನು ಕಡಿಮೆ ಮಾಡುವಲ್ಲಿ ನಿಯಮಗಳನ್ನು ನಿರ್ಲಕ್ಷಿಸಿದೆಯೇ ಎಂದು ಪರಿಶೀಲಿಸಲು ಮತ್ತು ಅದರ ಪ್ರಕಾರ ಕ್ರಮ ಕೈಗೊಳ್ಳಲು ಸರ್ಕಾರ ಮತ್ತು ಸೆಬಿಗೆ ಸುಪ್ರೀಂ ಕೋರ್ಟ್ ಆದೇಶಿಸಿದೆ.