ಎಸ್‍ಯುವಿ ಮರಕ್ಕೆ ಅಪ್ಪಳಿಸ ಐವರ ಸಾವು
ಗಿರಿದಿಹ್,ನ.18- ಜಾರ್ಖಂಡ್‍ನ ಗಿರಿದಿಹ್ ಜಿಲ್ಲೆಯಲ್ಲಿ ಎಸ್‍ಯುವಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿ, ಮತ್ತು ಇಬ್ಬರು ಮಕ್ಕಳು ಸೇರಿದಂತೆ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮುಫಸ್ಸಿಲ್ ಪೊಲೀಸ್ ಠಾಣಾ ವ್ಯಾಪ್ತಿಯ ಬಾಗ್ಮಾರಾದಲ್ಲಿ ಇಂದು ಮುಂಜಾನೆ 3 ಗಂಟೆ ಸುಮಾರಿಗೆ ವಾಹನದಲ್ಲಿ 10 ಜನರು ಮದುವೆ ಸಮಾರಂಭದಿಂದ ಹಿಂತಿರುಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಗಿರಿದಿಹ್ ಸದರ್ ಉಪವಿಭಾಗೀಯ ಪೊಲೀಸ್ ಅಧಿಕಾರಿ ಅನಿಲ್ ಸಿಂಗ್ ಮಾತನಾಡಿ, ಕಾರಿನಲ್ಲಿದ್ದವರು ಬಿರ್ನಿ ಪೊಲೀಸ್ ಠಾಣೆ ವ್ಯಾಪ್ತಿಯ ಥೋರಿಯಾ ಗ್ರಾಮದಿಂದ ಸುಮಾರು 40 ಕಿಮೀ ದೂರದಲ್ಲಿರುವ ಟಿಕೋಡಿಹ್‍ನಲ್ಲಿ ನಡೆದ ಸಮಾರಂಭದಲ್ಲಿ ಭಾಗವಹಿಸಲು ಬಂದಿದ್ದರು ಮತ್ತು ಅಪಘಾತ ಸಂಭವಿಸಿದಾಗ ಮನೆಗೆ ಹಿಂದಿರುಗುತ್ತಿದ್ದರು ಎಂದು ತಿಳಿಸಿದ್ದಾರೆ.
ಮಧ್ಯಪ್ರದೇಶದಲ್ಲಿ 340 ಕೋಟಿ ರೂ.ಮೌಲ್ಯದ ಮಾದಕ ವಸ್ತು, ನಗದು ಜಪ್ತಿ
ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಮತ್ತು ಉಳಿದ ಐವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವಾಹನ ಚಾಲಕ ಕಾರು ಚಾಲನೆ ಮಾಡುತ್ತಿದ್ದಾಗಲೇ ನಿದ್ರಿಸಿದ ಪರಿಣಾಮ ಈ ಅಪಘಾತವಾಗಿದೆ.