ಮಗನನ್ನು ಬಂಧಿಸಲು ಬಂದ ಪೊಲೀಸರ ಮೇಲೆ ಗುಂಡು ಹಾರಿಸಿದ ತಂದೆ
ಕಣ್ಣೂರು, ನ.4 (ಪಿಟಿಐ) – ಕ್ರಿಮಿನಲ್ ಪ್ರಕರಣವೊಂದರಲ್ಲಿ ಆರೋಪಿಯಾಗಿರುವ ತನ್ನ ಮಗನನ್ನು ಬಂಧಿಸಲು ಬಂದಿದ್ದ ಪೊಲೀಸ್ ತಂಡದ ಮೇಲೆ ಗುಂಡು ಹಾರಿಸಿದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಯನ್ನು ಬಾಬು ಥಾಮಸ್ ಎಂದು ಗುರುತಿಸಲಾಗಿದೆ.
ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು ವಲಪಟ್ಟಣ ಠಾಣೆಯ ಪೊಲೀಸ್ ಸಿಬ್ಬಂದಿಯ ತಂಡವು ರೋಷನ್‍ನನ್ನು ಬಂಧಿಸಲು ಇಲ್ಲಿನ ಚಿರಕ್ಕಲ್‍ನಲ್ಲಿರುವ ರೋಷನ್‍ನ ಮನೆಗೆ ತೆರಳಿತ್ತು.
ಪೊಲೀಸ್ ಸಿಬ್ಬಂದಿಗಳು ಕಡ್ಡಾಯವಾಗಿ ಪರೇಡ್‍ನಲ್ಲಿ ಭಾಗವಹಿಸಿ : ದಯಾನಂದ
ತಮಿಳುನಾಡು ಮೂಲದವರ ಮೇಲೆ ಹಲ್ಲೇ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರೋಷನ್ ಬೇಕಾಗಿದ್ದಾರೆ. ನಾವು ಮನೆಗೆ ತಲುಪಿದಾಗ, ಅವರ ತಂದೆ ಬಾಬು ಥಾಮಸ್ ಇದ್ದಕ್ಕಿದ್ದಂತೆ ಪೊಲೀಸ್ ತಂಡದ ಮೇಲೆ ಗುಂಡು ಹಾರಿಸಿದರು. ಅದೃಷ್ಟವಶಾತ್ ಯಾರಿಗೂ ಯಾವುದೇ ಗಾಯಗಳಾಗಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.
ಥಾಮಸ್‍ನನ್ನು ಬಲವಂತವಾಗಿ ಕಸ್ಟಡಿಗೆ ತೆಗೆದುಕೊಂಡಾಗ, ರೋಷನ್ ಗಲಿಬಿಲಿಯಿಂದ ತಪ್ಪಿಸಿಕೊಂಡಿದ್ದಾನೆ ಆತನ ಪತ್ತೆಗಾಗಿ ಹುಡುಕಾಟ ನಡೆಯುತ್ತಿದೆ ಎಂದು ಅವರು ಹೇಳಿದರು.