ಖಲಿಸ್ತಾನಿ ಭಯೋತ್ಪಾದಕ ಲಖ್ಬೀರ್ ಸಿಂಗ್ ಆಸ್ತಿ ಮುಟ್ಟುಗೋಲು
ಚಂಡೀಗಢ,ಅ.12-ರಾಷ್ಟ್ರೀಯ ತನಿಖಾ ಸಂಸ್ಥೆ ಹಾಗೂ ಭಯೋತ್ಪಾದನಾ ನಿಗ್ರಹದಳದ ದಾಳಿಯ ನಂತರ ಖಲಿಸ್ತಾನಿ ಭಯೋತ್ಪಾದಕ ಲಖ್ಬೀರ್ ಸಿಂಗ್ ರೋಡ್‍ನ ಆಸ್ತಿಯನ್ನು ಮುಟ್ಟುಗೋಲು ಹಾಕಲಾಗಿದೆ. ಎನ್‍ಐಎ ವಿಶೇಷ ನ್ಯಾಯಾಲಯದ ಆದೇಶದ ನಂತರ ಅಧಿಕಾರಿಗಳು ಆತನ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿದ್ದಾರೆ.
ನಿಷೇಧಿತ ಸಂಘಟನೆ ಇಂಟನ್ರ್ಯಾಶನಲ್ ಸಿಖ್ ಯೂತ್ ಫೆಡರೇಶನ್ (ಐಎಸ್‍ವೈಎಫ್) ಮುಖ್ಯಸ್ಥ ಲಖ್ಬೀರ್ ಸಿಂಗ್ ರೋಡ್‍ನನ್ನು ಕೇಂದ್ರ ಸರ್ಕಾರ ಭಯೋತ್ಪಾದಕರ ಪಟ್ಟಿಗೆ ಸೇರಿಸಿತ್ತು. ಆತನ ಪಂಜಾಬ್‍ನ ಮೊಗಾದಲ್ಲಿರುವ ಮನೆ ಹಾಗೂ ಆಸ್ತಿಯನ್ನು ಜಪ್ತಿ ಮಾಡಲಾಗಿದೆ. ಆತನ ವಿರುದ್ಧ ಹಲವಾರು ಭಯೋತ್ಪಾದಕ ಕೃತ್ಯ ಎಸಗಿರುವ ಪ್ರಕರಣಗಳಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬಿಹಾರ ರೈಲು ದುರಂತದಲ್ಲಿ, ನಾಲ್ವರ ಸಾವು, 70 ಕ್ಕೂ ಹೆಚ್ಚು ಮಂದಿಗೆ ಗಾಯ
ಆರ್ಡಿಎಕ್ಸ್ ಸೇರಿದಂತೆ ಶಸ್ತ್ರಾಸ್ತ್ರ ಮತ್ತು ಸ್ಪೋಟಕ ಕಳ್ಳಸಾಗಣಿಕೆಯಲ್ಲಿ ಆತನ ಪಾತ್ರವಿದೆ. ನವದೆಹಲಿಯ ಸರ್ಕಾರಿ ಅಧಿಕಾರಿಗಳು ಹಾಗೂ ರಾಜಕೀಯ ನಾಯಕರ ಮೇಲೆ ದಾಳಿ ಮಾಡಲು ಸಂಚು ರೂಪಿಸಿದ್ದ. ಅಲ್ಲದೇ ಪಂಜಾಬ್ನಲ್ಲಿ ದ್ವೇಷವನ್ನು ಹರಡುವುದರಲ್ಲಿ ಆತನ ಪ್ರಮುಖಪಾತ್ರವಿದೆ ಎಂದು ತಿಳಿಸಿದ್ದಾರೆ.