ಕಾರ್ಗಿಲ್‌ ಹುತಾತ್ಮರಿಗೆ ಪ್ರಧಾನಿ ಮೋದಿ ಶ್ರದ್ಧಾಂಜಲಿ, ‘ಪಾಪಿ’ಸ್ತಾನದ ವಿರುದ್ದ ವಾಗ್ದಾಳಿ
ನವದೆಹಲಿ,ಜು.26-ಕಳೆದ 1999ರ ಕಾರ್ಗಿಲ್‌ ಯುದ್ಧದಲ್ಲಿ ಹುತಾತ್ಮರಾದ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಪಾಕಿಸ್ತಾನವು ಈ ನಷ್ಟದಿಂದ ಏನನ್ನೂ ಕಲಿತಿಲ್ಲ ಮತ್ತು ಭಯೋತ್ಪಾದಕರಿಗೆ ಆಶ್ರಯ ನೀಡುವುದನ್ನು ಮುಂದುವರೆಸಿದೆ ಎಂದು ವಾಗ್ದಾಳಿ ನಡೆಸಿದರು.
ಪಾಕಿಸ್ತಾನವು ಯಾವುದೇ ದುಸ್ಸಾಹಸ ನಡೆಸಿದಾಗಲೆಲ್ಲಾ ಸೋಲನ್ನು ಎದುರಿಸಿದೆ. ಅದು ಇತಿಹಾಸದಿಂದ ಯಾವುದೇ ಪಾಠಗಳನ್ನು ಕಲಿತಿಲ್ಲ ಎಂದು ಕಾರ್ಗಿಲ್‌ ಯುದ್ಧ ಸಾರಕದಲ್ಲಿ ಪ್ರಧಾನಿ ಮೋದಿ ಹೇಳಿದರು.ಯುದ್ಧದಲ್ಲಿ ಹುತಾತ್ಮರಾದ ಭಾರತೀಯ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಪ್ರಧಾನಿ ಮೋದಿ, ದೇಶಕ್ಕಾಗಿ ಅವರ ತ್ಯಾಗ ಅಮರ ಮತ್ತು ಕಾರ್ಗಿಲ್‌ ವಿಜಯ್‌ ದಿವಸ್‌‍ ರೂಪದಲ್ಲಿ ಸದಾ ನೆನಪಿನಲ್ಲಿ ಉಳಿಯುತ್ತದೆ ಎಂದು ಹೇಳಿದರು.
ಜುಲೈ 26, 1999 ರಂದು, ಭಾರತೀಯ ಸೇನೆಯು ಆಪರೇಷನ್‌ ವಿಜಯ್‌‍ ನ ಯಶಸ್ವಿ ಪರಾಕಾಷ್ಠೆಯನ್ನು ಘೋಷಿಸಿತು, ಲಡಾಖ್‌ನ ಕಾರ್ಗಿಲ್‌ನ ಹಿಮಾವತ ಎತ್ತರದ ಮೇಲೆ ಸುಮಾರು ಮೂರು ತಿಂಗಳ ಸುದೀರ್ಘ ಯುದ್ಧದ ನಂತರ ವಿಜಯವನ್ನು ಘೋಷಿಸಿತು. ಈ ದಿನವನ್ನು ಕಾರ್ಗಿಲ್‌ ವಿಜಯ್‌ ದಿವಸ್‌‍ ಎಂದು ಆಚರಿಸಲಾಗುತ್ತದೆ, ಯುದ್ಧದಲ್ಲಿ ಭಾರತವು ಪಾಕಿಸ್ತಾನದ ವಿರುದ್ಧದ ವಿಜಯವನ್ನು ಸರಿಸುತ್ತದೆ.
ಇಂದು ಮುಂಜಾನೆ, ಪಿಎಂ ಮೋದಿ ಅವರು ಹಿಮಾಚಲ ಪ್ರದೇಶ ಮತ್ತು ಕೇಂದ್ರಾಡಳಿತ ಪ್ರದೇಶವಾದ ಲಡಾಖ್‌ ನಡುವೆ ಎಲ್ಲಾ ಹವಾಮಾನ ಸಂಪರ್ಕವನ್ನು ಒದಗಿಸುವ ಗುರಿಯನ್ನು ಹೊಂದಿರುವ ಸುರಂಗ ನಿರ್ಮಾಣಕ್ಕಾಗಿ ಮೊದಲ ಸ್ಫೋಟ ನಡೆಸಿದರು. ಲಡಾಖ್‌ನ ದ್ರಾಸ್‌‍ನಿಂದ ದೂರದಿಂದಲೇ ಶಿಂಕುನ್‌ ಲಾ ಸುರಂಗದ ನಿರ್ಮಾಣದ ಪ್ರಾರಂಭವನ್ನು ಗುರುತಿಸುವ ಮೊದಲ ಸ್ಫೋಟವನ್ನು ಪ್ರಧಾನಿ ನಡೆಸಿದರು ಎಂದು ವರದಿಯಾಗಿದೆ.