ಮಹಾರಾಜ್‌ಗಂಜ್‌ ಕ್ಷೇತ್ರದಲ್ಲಿ ಚುನಾವಣೆ ಹಿನ್ನೆಲೆಯಲ್ಲಿ ಇಂಡೋ-ನೇಪಾಳ ಗಡಿಬಂದ್‌
ಮಹಾರಾಜ್‌ಗಂಜ್‌ (ಯುಪಿ), ಮೇ 29 (ಪಿಟಿಐ)ಏಳನೇ ಹಂತದಲ್ಲಿ ಮಹಾರಾಜ್‌ಗಂಜ್‌ ಲೋಕಸಭಾ ಕ್ಷೇತ್ರದ ಮತದಾನದ ನಡೆಯುತ್ತಿರುವ ಹಿನ್ನೆಲೆಯಲ್ಲಿ ಇಂಡೋ-ನೇಪಾಳ ಗಡಿಯನ್ನು ಇಂದು ಸಂಜೆಯಿಂದ ಶನಿವಾರ ಸಂಜೆಯವರೆಗೆ 72 ಗಂಟೆಗಳ ಕಾಲ ಮುಚ್ಚಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜೂನ್‌ 1 ರಂದು ನಡೆಯಲಿರುವ ಮತದಾನದ ಹಿನ್ನೆಲೆಯಲ್ಲಿ ಈ ಪ್ರದೇಶದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಜಿಲ್ಲೆಯ ಎರಡು ನಿರ್ಣಾಯಕ ಗಡಿ ಬಿಂದುಗಳಲ್ಲಿ ಭಾರತ ಮತ್ತು ನೇಪಾಳದ ಜಂಟಿ ಪಡೆಗಳನ್ನು ನಿಯೋಜಿಸಲಾಗುವುದು ಮತ್ತು ತಡೆಗೋಡೆಗಳನ್ನು ಹಾಕಲಾಗುವುದು ಎಂದು ಜಿಲ್ಲಾ ವ್ಯಾಜಿಸ್ಟ್ರೇಟ್‌ ಅನ್ಯುಾ ಝಾ ಪಿಟಿಐಗೆ ತಿಳಿಸಿದ್ದಾರೆ.
ನೇಪಾಳದೊಂದಿಗಿನ ಕ್ರಾಸಿಂಗ್‌ ಪಾಯಿಂಟ್‌ಗಳನ್ನು ಸಂಪೂರ್ಣವಾಗಿ ಮುಚ್ಚಲಾಗುವುದು ಮತ್ತು ಈ ಅವಧಿಯಲ್ಲಿ ತುರ್ತು ಸೇವೆಗಳನ್ನು ಮಾತ್ರ ಅನುಮತಿಸಲಾಗುವುದು ಎಂದು ಡಿಎಂ ಹೇಳಿದರು.
ಮಹರಾಜ್‌ಗಂಜ್‌ ಕ್ಷೇತ್ರದಲ್ಲಿ ಮತದಾನಕ್ಕೆ ಮುನ್ನ ಜನರ ಅಕ್ರಮ ಸಾಗಣೆಯನ್ನು ತಡೆಯಲು ನೇಪಾಳದೊಂದಿಗಿನ ಭಾರತದ ಗಡಿಯುದ್ದಕ್ಕೂ ವ್ಯಾಪಾರ ಮತ್ತು ಸಾರಿಗೆ ಕೇಂದ್ರಗಳಲ್ಲಿ ಕ್ಯಾಮೆರಾಗಳನ್ನು ಅಳವಡಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.