ಬಿಹಾರ ಚುನಾವಣೋತ್ತರ ಹಿಂಸಾಚಾರಕ್ಕೆ ಓರ್ವ ಬಲಿ
ಸರನ್‌, ಮೇ 21 (ಪಿಟಿಐ)ಬಿಹಾರದ ಸರನ್‌ ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ ನಡೆದ ಚುನಾವಣೋತ್ತರ ಹಿಂಸಾಚಾರದಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ ಮತ್ತು ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಭಿಖಾರಿ ಠಾಕೂರ್‌ ಚೌಕ್‌ ಬಳಿಯ ಬಡಾ ಟೆಲಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎಂದು ಅವರು ಹೇಳಿದ್ದಾರೆ. ಈ ಪ್ರದೇಶದಲ್ಲಿ ನಿನ್ನೆ ನಡೆದ ಮತದಾನದ ವೇಳೆ ಅಕ್ರಮಗಳ ಆರೋಪದ ಮೇಲೆ ಬಿಜೆಪಿ ಮತ್ತು ಆರ್‌ಜೆಡಿ ಬೆಂಬಲಿಗರು ಎನ್ನಲಾದ ಎರಡು ಗುಂಪುಗಳ ನಡುವೆ ವಾಗ್ವಾದ ನಡೆದಿದ್ದು, ಈ ನಡುವೆ ಗುಂಡು ಹಾರಿಸಲಾಗಿದೆ.
ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸ್‌‍ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮತರನ್ನು ಚಂದನ್‌ ಯಾದವ್‌ (25) ಎಂದು ಗುರುತಿಸಲಾಗಿದೆ.
ಗಾಯಗೊಂಡ ವ್ಯಕ್ತಿಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ನಂತರ ಅವರಲ್ಲಿ ಇಬ್ಬರನ್ನು ಉತ್ತಮ ಚಿಕಿತ್ಸೆಗಾಗಿ ಪಾಟ್ನಾಕ್ಕೆ ಕಳುಹಿಸಲಾಗಿದೆ ಎಂದು ಪೊಲೀಸ್‌‍ ವರಿಷ್ಠಾಧಿಕಾರಿ ಗೌರವ್‌ ಮಂಗಳಾ ತಿಳಿಸಿದ್ದಾರೆ.
ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು, ಇಂದಿನ ಘಟನೆಗೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.ಜ್ವಾಲೆಯನ್ನು ತಡೆಗಟ್ಟಲು ಜಿಲ್ಲೆಯಲ್ಲಿ ಇಂಟರ್ನೆಟ್‌ ಅನ್ನು ಸಹ ಸ್ಥಗಿತಗೊಳಿಸಲಾಗಿದೆ ಎಂದು ಅವರು ಹೇಳಿದರು.
ಬಿಜೆಪಿ ಸಂಸದ ರಾಜೀವ್‌ ಪ್ರತಾಪ್‌ ರೂಡಿ ವಿರುದ್ಧ ಆರ್‌ಜೆಡಿ ಅಧ್ಯಕ್ಷ ಲಾಲು ಪ್ರಸಾದ್‌ ಅವರ ಪುತ್ರಿ ರೋಹಿಣಿ ಆಚಾರ್ಯ ಸರಣ್‌ನಲ್ಲಿ ಮಹಾಘಟಬಂಧನ್‌ ಅಭ್ಯರ್ಥಿಯಾಗಿದ್ದರು.