ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(27-04-2024)
ನಿತ್ಯ ನೀತಿ :ಯಾವುದಕ್ಕೂ ಭಯ ಪಡದಿರು. ನಿನ್ನ ಕರ್ಮ, ನಿನ್ನ ಧರ್ಮ, ನಿನ್ನ ಶ್ರಮ, ಭಗವಂತನ ಮೇಲಿರುವ ನಿನ್ನ ಪ್ರೇಮ ನಿನ್ನನ್ನು ರಕ್ಷಿಸುವುದು. ಇದು ಸತ್ಯ..!
ಪಂಚಾಂಗ : ಶನಿವಾರ, 27-04-2024ಕ್ರೋಧಿನಾಮ ಸಂವತ್ಸರ / ಉತ್ತರಾಯಣ / ವಸಂತ ಋತು / ಚೈತ್ರ ಮಾಸ / ಕೃಷ್ಣ ಪಕ್ಷ / ತಿಥಿ: ತೃತೀಯಾ / ನಕ್ಷತ್ರ: ಜ್ಯೇಷ್ಠಾ / ಯೋಗ: ಪರಿಘ / ಕರಣ: ಭವಸೂರ್ಯೋದಯ : ಬೆ.06.01ಸೂರ್ಯಾಸ್ತ : 06.34ರಾಹುಕಾಲ : 9.00-10.30ಯಮಗಂಡ ಕಾಲ : 1.30-3.00ಗುಳಿಕ ಕಾಲ : 6.00-7.30
ರಾಶಿಭವಿಷ್ಯ:ಮೇಷ: ಬ್ಯಾಂಕ್‌ ನೌಕರರಿಗೆ ಕೆಲಸದ ಒತ್ತಡ ಹೆಚ್ಚಾಗಿರು ತ್ತದೆ. ಆರೋಗ್ಯದ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸದಿರಿ.ವೃಷಭ: ಕಚೇರಿ ಕೆಲಸವನ್ನು ಮನಃಪೂರ್ವಕವಾಗಿ ಮಾಡಿ. ಅನ್ಯರಿಗೆ ಉಪಕಾರ ಮಾಡುವಿರಿ.ಮಿಥುನ: ಬಂಧುಗಳನ್ನು ವಿನಾಕಾರಣ ದ್ವೇಷಿಸುವಿರಿ.
ಕಟಕ: ಶತ್ರುಗಳನ್ನು ಜಯಿಸುವಿರಿ. ನಿಮ್ಮ ಪ್ರತಿಭೆಗೆ ಸೂಕ್ತ ಮನ್ನಣೆ ಸಿಗಲಿದೆ.ಸಿಂಹ: ಶ್ರಮ ಹೆಚ್ಚಿದ್ದರೂ ದುಡಿಮೆ ಲಾಭದಾಯಕ ವಾಗಿರುವುದರಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ.ಕನ್ಯಾ: ಉನ್ನತ ಅಧಿ ಕಾರಿ ಭೇಟಿಗಾಗಿ ದಿನವಿಡೀ ಓಡಾಡಬೇಕಾದ ಪರಿಸ್ಥಿತಿ ಎದುರಾಗುವುದು.
ತುಲಾ: ಗಣ್ಯ ವ್ಯಕ್ತಿಗಳನ್ನು ಸಂಪರ್ಕಿಸುವಿರಿ. ತಾಯಿಯ ಆರೋಗ್ಯದಲ್ಲಿ ಚೇತರಿಕೆ.ವೃಶ್ಚಿಕ: ಯಾರದ್ದೋ ಮಾತು ಕೇಳಿ ನಿಮ್ಮ ಅಮೂಲ್ಯ ಸಮಯ ಹಾಳುಮಾಡಿಕೊಳ್ಳದಿರಿ.ಧನುಸ್ಸು: ನಕಾರಾತ್ಮಕವಾಗಿ ಮಾತನಾಡುವ ಜನರಿಂದ ದೂರವಿರುವುದು ಬಹಳ ಒಳ್ಳೆಯದು.
ಮಕರ: ಕಣ್ಣಿನ ದೃಷ್ಟಿಯಲ್ಲಿ ಬದಲಾವಣೆ ಯಾಗುವುದರಿಂದ ವೈದ್ಯರನ್ನು ಭೇಟಿ ಮಾಡಿ.ಕುಂಭ: ಪ್ರಯತ್ನಗಳು ಫಲ ನೀಡುವ ಸಾಧ್ಯತೆಗಳಿವೆ. ಪ್ರಮುಖ ನಿರ್ಧಾರ ಕೈಗೊಳ್ಳಲು ಉತ್ತಮ ಸಮಯ.ಮೀನ: ಮಕ್ಕಳಿಂದ ಸಂತೋಷ ಉಂಟಾಗುವುದು. ಆರೋಗ್ಯದ ಕಡೆ ಗಮನ ಹರಿಸಿ.