ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (23-08-2024)

ನಿತ್ಯ ನೀತಿ: ದ್ವೇಷಿಸಿದರೂ ಪರವಾಗಿಲ್ಲ, ಪ್ರೀತಿಸುವ ಹಾಗೆ ನಟಿಸಬಾರದು.
ಪಂಚಾಂಗ : ಶುಕ್ರವಾರ, 23-08-2024ಕ್ರೋಧಿನಾಮ ಸಂವತ್ಸರ / ದಕ್ಷಿಣಾಯಣ / ವರ್ಷ ಋತು / ಶ್ರಾವಣ ಮಾಸ / ಕೃಷ್ಣ ಪಕ್ಷ / ತಿಥಿ: ಚತುರ್ಥಿ / ನಕ್ಷತ್ರ: ರೇವತಿ / ಯೋಗ: ಶೂಲ / ಕರಣ: ಕೌಲವ
ಸೂರ್ಯೋದಯ – ಬೆ.06.08ಸೂರ್ಯಾಸ್ತ – 06.36ರಾಹುಕಾಲ – 10.30-12.00ಯಮಗಂಡ ಕಾಲ – 3.00-4.30ಗುಳಿಕ ಕಾಲ – 7.30-9.00
ರಾಶಿಭವಿಷ್ಯ :ಮೇಷ: ನೀವು ಹಿಂದೆ ಮಾಡಿದ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ. ಶತ್ರುಗಳ ಕಾಟ ತಪ್ಪಲಿದೆ.ವೃಷಭ: ಹಣದ ಕೊರತೆಯಿಂದ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು.ಮಿಥುನ: ಕೂಡಿಟ್ಟ ಹಣದ ನಷ್ಟವಾಗುವುದು.
ಕಟಕ: ಶಾಂತ ಮನಸ್ಸಿನಿಂದ ಕೆಲಸದ ಕಡೆ ಗಮನ ಕೇಂದ್ರೀಕರಿಸಲು ಯತ್ನಿಸಿಸಿಂಹ: ಸರ್ಕಾರಿ ಕೆಲಸ ಮಾಡುವವರು ಕೆಲವು ದೊಡ್ಡ ಸವಾಲುಗಳನ್ನು ಎದುರಿಸಬೇಕಾಗಬಹುದು.ಕನ್ಯಾ: ಕುಟುಂಬದಲ್ಲಿ ಪರಿಸ್ಥಿತಿಗಳು ಏರಿಳಿತಗಳಿಂದ ಕೂಡಿರುತ್ತವೆ. ವೈವಾಹಿಕ ಜೀವನದ ಬಗ್ಗೆ ಗಮನ ಹರಿಸಿ.
ತುಲಾ: ಸರ್ಕಾರಿ ಉದ್ಯೋಗಿಗಳಿಗೆ ನೆಮ್ಮದಿ. ಪಾಲುದಾರಿಕೆ ವ್ಯವಹಾರದಲ್ಲಿ ಸಾಮಾನ್ಯ ಲಾಭ.ವೃಶ್ಚಿಕ: ಖರ್ಚುಗಳು ಸ್ವಲ್ಪ ಹೆಚ್ಚಾಗಬಹುದು, ಆದರೆ ಯಾವುದೇ ದೊಡ್ಡ ಸಮಸ್ಯೆ ಇರುವುದಿಲ್ಲ.ಧನುಸ್ಸು: ಕೃಷಿ ಕ್ಷೇತ್ರದ ಅಭಿವೃದ್ಧಿಗೆ ವಿನೂತನ ರೀತಿಯಲ್ಲಿ ಪ್ರಯತ್ನ ಮಾಡುವಿರಿ.
ಮಕರ: ಬಹುದಿನಗಳ ಆಸೆ ಈಡೇರಲಿದೆ. ಕುಟುಂಬ ಸಮೇತ ತೀರ್ಥಯಾತ್ರೆ ಮಾಡುವಿರಿ.ಕುಂಭ: ಮನೆಯಲ್ಲಿ ಮಂಗಳಕಾರ್ಯಗಳು ನಡೆಯುವ ಸೂಚನೆಗಳು ಕಾಣುತ್ತವೆ.ಮೀನ: ಸಣ್ಣ ವ್ಯಾಪಾರಸ್ಥರಿಗೆ ಅನುಕೂಲಕರ ದಿನ. ಲಾಭ ಗಳಿಸಲು ಹಲವು ಅವಕಾಶಗಳು ಒದಗಲಿವೆ.