ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (26-06-2024)
ನಿತ್ಯ ನೀತಿ :ಆಡಿದ ಮಾತನ್ನು ಆಡಿದ ವ್ಯಕ್ತಿ ಮರೆಯಬಹುದು. ಕೇಳಿಸಿಕೊಂಡ ವ್ಯಕ್ತಿ, ನೋವು ಪಡ್ತಿರೋ ಮನಸ್ಸು ಯಾವತ್ತೂ ಮರೆಯೋಲ್ಲ.
ಪಂಚಾಂಗ : ಬುಧವಾರ , 26-06-2024ಕ್ರೋಧಿನಾಮ ಸಂವತ್ಸರ / ದಕ್ಷಿಣಾಯಣ / ಗ್ರೀಷ್ಮ ಋತು / ಜ್ಯೇಷ್ಠ ಮಾಸ /ಕೃಷ್ಣ ಪಕ್ಷ / ತಿಥಿ: ಪಂಚಮಿ / ನಕ್ಷತ್ರ: ಧನಿಷ್ಠಾ / ಯೋಗ: ವಿಷ್ಕಂಭ / ಕರಣ: ಕೌಲವ
ಸೂರ್ಯೋದಯ – ಬೆ.05.56ಸೂರ್ಯಾಸ್ತ – 06.49ರಾಹುಕಾಲ – 12.00-1.30ಯಮಗಂಡ ಕಾಲ – 7.30-9.00ಗುಳಿಕ ಕಾಲ – 10.30-12.00
ರಾಶಿಭವಿಷ್ಯ :ಮೇಷ: ಪತ್ನಿ ಹಾಗೂ ಮಕ್ಕಳ ಸಹಕಾರದಿಂದ ಕೆಲಸ-ಕಾರ್ಯಗಳು ಸುಗಮವಾಗಿ ನೆರವೇರಲಿವೆ.ವೃಷಭ: ಮಕ್ಕಳಿಂದ ಸಂತಸ ಸಿಗಲಿದೆ.ಮಿಥುನ: ಉದ್ಯೋಗದಲ್ಲಿ ಬಡ್ತಿ
ಕಟಕ: ಅಮೂಲ್ಯ ವಸ್ತುವಿನ ಕಳ್ಳತನವಾಗಲಿದೆ.ಸಿಂಹ: ನಿಮ್ಮ ಮಾತೇ ಸರಿ ಎಂಬ ಹಠ ಬಿಟ್ಟು ವಿಶಾಲ ಮನೋಭಾವದಿಂದ ಚಿಂತನೆ ಮಾಡುವುದು ಒಳಿತು.ಕನ್ಯಾ: ಅಂದುಕೊಂಡಿದ್ದ ಕೆಲಸಗಳು ಉತ್ತಮವಾಗಿ ನೆರವೇರುವುದರಿಂದ ನೆಮ್ಮದಿ ಸಿಗಲಿದೆ.
ತುಲಾ: ಹಣದ ಕೊರತೆ ಇರುವುದಿಲ್ಲವಾದ್ದರಿಂದ ನಿಶ್ಚಿಂತರಾಗಿರುವಿರಿ.ವೃಶ್ಚಿಕ: ಬುದ್ಧಿಹೀನರಾಗಿ ವರ್ತಿಸುವಿರಿ.ಧನುಸ್ಸು: ಸಾಲಗಾರರ ಕಿರಿಕಿರಿ ಉಂಟಾಗಲಿದೆ.
ಮಕರ: ಅಜೀರ್ಣ ಮತ್ತು ಉದರಕ್ಕೆ ಸಂಬಂಧಿಸಿದ ಅನಾರೋಗ್ಯ ಎದುರಾಗಲಿದೆ.ಕುಂಭ: ಸ್ನೇಹಿತರ ಸಹಕಾರ ಸಿಗಲಿದೆ.ಮೀನ: ಜವಾಬ್ದಾರಿ ಸ್ವೀಕರಿಸುವ ಮೊದಲು ಅದನ್ನು ನಿಭಾಯಿಸುವ ಬಗ್ಗೆ ಯೋಚಿಸಿ.