ಢಾಕಾದಲ್ಲಿ ಭಾರತೀಯ ವೀಸಾ ಕೇಂದ್ರ ಪುನರಾರಂಭ; ಸೀಮಿತ ಕಾರ್ಯಾಚರಣೆ ಪತ್ರಿಕಾ ಪ್ರಕಟಣೆಯಲ್ಲಿ, ಭಾರತೀಯ ವೀಸಾ ಅರ್ಜಿ ಕೇಂದ್ರ() ತನ್ನ ಢಾಕಾ ಕೇಂದ್ರದಲ್ಲಿ ಸೀಮಿತ ಕಾರ್ಯಾಚರಣೆಗಳನ್ನು ಪುನರಾರಂಭಿಸುವುದಾಗಿ ಘೋಷಿಸಿದೆ. ಢಾಕಾ: ಬಾಂಗ್ಲಾದೇಶದಲ್ಲಿ ನಾಗರಿಕ ದಂಗೆಯ ನಂತರ ಭಾರತೀಯ ವೀಸಾ ಅರ್ಜಿ ಕೇಂದ್ರವು ಮಂಗಳವಾರ "ಸೀಮಿತ ಕಾರ್ಯಾಚರಣೆಗಳನ್ನು" ಪುನರಾರಂಭಿಸಿದೆ.ವಿವಾದಾತ್ಮಕ ಉದ್ಯೋಗ ಮೀಸಲಾತಿಗೆ ಸಂಬಂಧಿಸಿದಂತೆ ಅವಾಮಿ ಲೀಗ್ ನೇತೃತ್ವದ ಸರ್ಕಾರದ ವಿರುದ್ಧ ನಾಗರಿಕ ದಂಗೆಯ ನಂತರ 76 ವರ್ಷದ ಶೇಖ್ ಹಸೀನಾ ಅವರು ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿ ದೇಶ ತೊರೆದಿದ್ದಾರೆ.ಪತ್ರಿಕಾ ಪ್ರಕಟಣೆಯಲ್ಲಿ, ಭಾರತೀಯ ವೀಸಾ ಅರ್ಜಿ ಕೇಂದ್ರ() ತನ್ನ ಢಾಕಾ ಕೇಂದ್ರದಲ್ಲಿ ಸೀಮಿತ ಕಾರ್ಯಾಚರಣೆಗಳನ್ನು ಪುನರಾರಂಭಿಸುವುದಾಗಿ ಘೋಷಿಸಿದೆ."() ಢಾಕಾ ಸೀಮಿತ ಕಾರ್ಯಾಚರಣೆಗಳನ್ನು ಪುನರಾರಂಭಿಸಿದೆ. ಪಾಸ್‌ಪೋರ್ಟ್‌ಗಳ ಸಂಗ್ರಹಣೆಗೆ ಸಂಬಂಧಿಸಿದಂತೆ ವೈಯಕ್ತಿಕ ಅರ್ಜಿದಾರರಿಗೆ ಸಂದೇಶಗಳನ್ನು ಕಳುಹಿಸಲಾಗುತ್ತದೆ" ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ.ಸೀಮಿತ ಕಾರ್ಯಾಚರಣೆಗಳ ಕಾರಣ, ಪ್ರಕ್ರಿಯೆಯು ಹೆಚ್ಚು ಸಮಯ ತೆಗೆದುಕೊಳ್ಳಬಹುದು. ಹೀಗಾಗಿ ಅರ್ಜಿದಾರರು ತಮ್ಮ ಪಾಸ್‌ಪೋರ್ಟ್‌ಗಳನ್ನು ಪಡೆಯಲು ಟೆಕ್ಸ್ಟ್ ಮೆಸೇಜ್ ಸ್ವೀಕರಿಸಿದ ನಂತರವೇ ವೀಸಾ ಕೇಂದ್ರಕ್ಕೆ ಆಗಮಿಸುವಂತೆ ಮನವಿ ಮಾಡಿದೆ.