ಕುಲಭೂಷಣ್ ಯಾದವ್ ಪ್ರಕರಣ: ವಕೀಲರನ್ನು ನೇಮಿಸಲು ಭಾರತಕ್ಕೆ ಪಾಕ್ ಉಚ್ಛ ನ್ಯಾಯಾಲಯ ಕಾಲಾವಕಾಶ ಕುಲಭೂಷಣ್ ಜಾದವ್ ಅವರಿಗೆ ಯಾವುದೇ ಬಗೆಯ ರಾಜತಾಂತ್ರಿಕ ನೆರವನ್ನು ನೀಡಲು ಪಾಕ್ ಸಮ್ಮತಿ ಸೂಚಿಸಿಲ್ಲ ಹಾಗೂ ಮರಣದಂಡನೆ ತೀರ್ಪು ಪ್ರಶ್ನಾರ್ಹ ಎಂದು ಭಾರತ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ವಾದಿಸಿತ್ತು. ಇಸ್ಲಾಮಾಬಾದ್: ಭಾರತದ ಪರ ಗೂಢಚಾರ ನಡೆಸಿರುವ ಆರೋಪಕ್ಕೊಳಗಾಗಿ ಪಾಕಿಸ್ತಾನ ಜೈಲಿನಲ್ಲಿರುವ ಕುಲಭೂಷಣ್ ಜಾದವ್ ನ್ಯಾಯಾಲಯ ವಿಚಾರಣೆಗೆ ಸಂಬಂಧಿಸಿದಂತೆ ವಕೀಲರನ್ನು ನೇಮಿಸಲು ಭಾರತಕ್ಕೆ ಪಾಕ್ ಉಚ್ಛನ್ಯಾಯಾಲಯ ಕಾಲಾವಕಾಶ ನೀಡಿದೆ.ಇದನ್ನೂ ಓದಿ: ಬೆಂಗಳೂರು: ಪಾಕ್ ನ ಐಎಸ್‌ಐಗೆ ಬೇಹುಗಾರಿಕೆ ಮಾಡುತ್ತಿದ್ದ ರಾಜಸ್ತಾನ ಮೂಲದ ವ್ಯಕ್ತಿ ಬಂಧನ!51 ವರ್ಷದ ನಿವೃತ್ತ ನೌಕಾದಳ ಅಧಿಕಾರಿಯಾಗಿರುವ ಕುಲಭೂಷಣ್ ಜಾದವ್ ಅವರಿಗೆ ಈ ಹಿಂದೆ ಪಾಕ್ ಸೇನಾ ನ್ಯಾಯಾಲಯ ಬೇಹುಗಾರಿಕೆ ಮತ್ತು ಭಯೋತ್ಪಾದನಾ ಚಟುವಟಿಕೆ ನಡೆಸಿದ ಆರೋಪದಡಿ 2017ರಲ್ಲಿ ಮರಣದಂಡನೆ ಸಜೆ ವಿಧಿಸಿತ್ತು.ಇದನ್ನೂ ಓದಿ: ಪಾಕಿಸ್ತಾನಕ್ಕೆ ಬೇಹುಗಾರಿಕೆ: ಪೊಲೀಸರಿಂದ ಗ್ಯಾಸ್ ಏಜೆನ್ಸಿ ಮಾಲೀಕನ ಬಂಧನ!ಪಾಕ್ ಸೇನಾ ನ್ಯಾಯಾಲಯದ ತೀರ್ಪಿನ ವಿರುದ್ಧ ಭಾರತ ಅಂತಾರಾಷ್ಟ್ರೀಯ ನ್ಯಾಯಾಲಯದ ಮೆಟ್ಟಿಲೇರಿತ್ತು. ಕುಲಭೂಷಣ್ ಜಾದವ್ ಅವರಿಗೆ ಯಾವುದೇ ಬಗೆಯ ರಾಜತಾಂತ್ರಿಕ ನೆರವನ್ನು ನೀಡಲು ಪಾಕ್ ಸಮ್ಮತಿ ಸೂಚಿಸಿಲ್ಲ ಹಾಗೂ ಮರಣದಂಡನೆ ತೀರ್ಪು ಪ್ರಶ್ನಾರ್ಹ ಎಂದು ಭಾರತ ವಾದಿಸಿತ್ತು.ಇದನ್ನೂ ಓದಿ: ಗೂಢಚರ್ಯೆಗೆ ಐಫೋನ್ ಬಳಸಿದ್ದ ಇಸ್ರೇಲಿ ಸಂಸ್ಥೆ: ಭದ್ರತಾ ಲೋಪ ಸರಿಪಡಿಸಿದ ಆಪಲ್!ಇತ್ತಂಡಗಳ ವಾದ ಆಲಿಸಿದ ಅಂತಾರಾಷ್ಟ್ರೀಯ ನ್ಯಾಯಾಲಯ ಜಾದವ್ ಅವರಿಗೆ ರಾಜತಾಂತ್ರಿಕ ನೆರವನ್ನು ನೀಡಬೇಕು ಹಾಗೂ ಮರಣದಂಡನೆ ತೀರ್ಪನ್ನು ಪುನರ್ ಪರಿಶೀಲಿಸಬೇಕು ಎಂದು ನಿರ್ದೇಶನ ನೀಡಿತ್ತು.ಇದನ್ನೂ ಓದಿ: ಪೆಗಾಸಸ್ ಸ್ಪೈ ವೇರ್: 40 ಕ್ಕೂ ಹೆಚ್ಚು ಭಾರತೀಯ ಪತ್ರಕರ್ತರ ಫೋನ್ ಹ್ಯಾಕ್; ಗೂಢಚರ್ಯೆ ಯತ್ನ?