'ಏರ್ ಲಿಫ್ಟ್ ಗೆ ಭಾರತದ ವಿಮಾನ ಬೇಡ': ಮಾಲ್ಡೀವ್ಸ್ ಅಧ್ಯಕ್ಷರ ಹಠಮಾರಿತನಕ್ಕೆ 14 ವರ್ಷದ ಬಾಲಕ ಬಲಿ ಭಾರತ ಮತ್ತು ಮಾಲ್ಡೀವ್ಸ್ ನಡುವಿನ ರಾಜತಾಂತ್ರಿಕ ಬಿಕ್ಕಟ್ಟು ತಾರಕಕ್ಕೇರಿರುವಂತೆಯೇ ಮಾಲ್ಡೀವ್ಸ್ ಅಧ್ಯಕ್ಷರ ಹಠಮಾರಿತನಕ್ಕೆ 14 ವರ್ಷದ ಬಾಲಕ ಬಲಿಯಾಗಿರುವ ಘಟನೆ ವರದಿಯಾಗಿದೆ. ಮಾಲೆ: ಭಾರತ ಮತ್ತು ಮಾಲ್ಡೀವ್ಸ್ ನಡುವಿನ ರಾಜತಾಂತ್ರಿಕ ಬಿಕ್ಕಟ್ಟು ತಾರಕಕ್ಕೇರಿರುವಂತೆಯೇ ಮಾಲ್ಡೀವ್ಸ್ ಅಧ್ಯಕ್ಷರ ಹಠಮಾರಿತನಕ್ಕೆ 14 ವರ್ಷದ ಬಾಲಕ ಬಲಿಯಾಗಿರುವ ಘಟನೆ ವರದಿಯಾಗಿದೆ.ಹೌದು.. ಚುನಾವಣೆ ಬಳಿಕ ಭಾರತೀಯ ಸೇನೆಯನ್ನು ಹಿಂದಕ್ಕೆ ಕರೆಸಿಕೊಳ್ಳುವಂತೆ ಸೂಚಿಸಿದ್ದ ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್‌ ಮುಯಿಜು ( ) ಬಳಿಕ ಪ್ರಧಾನಿ ನರೇಂದ್ರ ಮೋದಿ ( ) ಅವರು ಲಕ್ಷದ್ವೀಪಕ್ಕೆ ಭೇಟಿ ನೀಡಿದ ಫೋಟೊಗಳನ್ನು ಅಪ್‌ಲೋಡ್‌ ಮಾಡಿದ ಒಂದೇ ಕಾರಣಕ್ಕೆ ಮಾಲ್ಡೀವ್ಸ್‌ ಸುಖಾಸುಮ್ಮನೆ ಬಿಕ್ಕಟ್ಟು ಸೃಷ್ಟಿಸಿ ಉಭಯ ದೇಶಗಳ ನಡುವಿನ ಬಿಕ್ಕಟ್ಟು ತಾರಕಕ್ಕೇರುವಂತೆ ಮಾಡಿದ್ದಾರೆ. ಮುಯಿಜು ಹಠಮಾರಿತನಕ್ಕೆ 13 ವರ್ಷದ ಬಾಲಕನೊಬ್ಬ ಮೃತಪಟ್ಟಿದ್ದಾನೆ. ಇದನ್ನೂ ಓದಿ: ಮಾಲ್ಡೀವ್ಸ್ ಪ್ರವಾಸ ರದ್ದುಗೊಳಿಸಿ ಲಕ್ಷದ್ವೀಪಕ್ಕೆ ನಾಗಾರ್ಜುನ ಪ್ರಯಾಣ: ನಾನು ಯಾರಿಗೂ ಹೆದರಲ್ಲ ಎಂದ ನಟ!ಬ್ರೇನ್‌ ಟ್ಯೂಮರ್‌ ಹಾಗೂ ಸ್ಟ್ರೋಕ್‌ನಿಂದ (ಪಾರ್ಶ್ವವಾಯು) ಬಳಲುತ್ತಿದ್ದ ಬಾಲಕನೊಬ್ಬನನ್ನು ಭಾರತದ ವಿಮಾನದಲ್ಲಿ ( ) ಏರ್‌ಲಿಫ್ಟ್‌ ಮಾಡಲು ಮಾಲ್ಡೀವ್ಸ್‌ ಅಧ್ಯಕ್ಷ ಮೊಹಮ್ಮದ್‌ ಮುಯಿಜು ( ) ನೇತೃತ್ವದ ಸರ್ಕಾರ ಅನುಮತಿ ನೀಡಲು ವಿಳಂಬ ಧೋರಣೆ ಅನುಸರಿಸಿದ ಕಾರಣ 13 ವರ್ಷದ ಬಾಲಕ ಮೃತಪಟ್ಟಿದ್ದಾನೆ. ಉತ್ತರ ಕೊರೊಲಿನಾದ ಗಾಫ್‌ ಆಲಿಫ್‌ ವಿಲ್ಲಿಂಗ್ಲಿಯಲ್ಲಿರುವ ದೂರದ ವಿಲ್ಮಿಂಗ್ಟನ್‌ ದ್ವೀಪದಲ್ಲಿ ವಾಸಿಸುವ 13 ವರ್ಷದ ಬಾಲಕನೊಬ್ಬನಿಗೆ ಸ್ಟ್ರೋಕ್‌ ಆಗಿದೆ. ಆತನು ಬ್ರೇನ್‌ ಟ್ಯೂಮರ್‌ನಿಂದ ಬಳಲುತ್ತಿರುವ ಕಾರಣ ಕ್ಷಿಪ್ರವಾಗಿ ಉನ್ನತ ಚಿಕಿತ್ಸೆಯ ಅನಿವಾರ್ಯತೆ ಉಂಟಾಗಿದೆ. ಆಗ ಆತನ ಪೋಷಕರು ಮಾಲ್ಡೀವ್ಸ್‌ ರಾಜಧಾನಿ ಮಾಲೆಯಲ್ಲಿರುವ ಆಸ್ಪತ್ರೆಗೆ ಏರ್‌ಲಿಫ್ಟ್‌ ಮಾಡಲು ಮುಂದಾಗಿದ್ದಾರೆ. ಭಾರತದ ವಿಮಾನದಲ್ಲಿ ಏರ್‌ಲಿಫ್ಟ್‌ ಮಾಡಲು ತೀರ್ಮಾನಿಸಿದ್ದು, ಮಾಲ್ಡೀವ್ಸ್‌ ಸರ್ಕಾರದ ಅನುಮತಿ ಕೇಳಿದ್ದಾರೆ. ಆದರೆ ಚೀನಾ ಪರ ನಿಲುವು ಹೊಂದಿರುವ, ಚೀನಾವನ್ನು ಓಲೈಸುವ ಮೊಹಮ್ಮದ್‌ ಮುಯಿಜು ನೇತೃತ್ವದ ಸರ್ಕಾರವು ಭಾರತದ ವಿಮಾನದಲ್ಲಿ ಏರ್‌ಲಿಫ್ಟ್‌ ಮಾಡಲು ಅನುಮತಿ ನೀಡಿಲ್ಲ. ಅನುಮತಿ ನೀಡುವಂತೆ ಮನವಿ ಸಲ್ಲಿಸಿದ 16 ಗಂಟೆಯಾದರೂ ಮಾಲ್ಡೀವ್ಸ್‌ ಸರ್ಕಾರವು ಮಾನವೀಯತೆ ತೋರಿಸಿಲ್ಲ. ಇದರಿಂದಾಗಿ 13 ವರ್ಷದ ಬಾಲಕನು ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ. ಮಾಲ್ಡೀವ್ಸ್‌ ಸರ್ಕಾರದ ಧೋರಣೆಯನ್ನು ಬಾಲಕನ ಕುಟುಂಬಸ್ಥರು ತೀವ್ರವಾಗಿ ಖಂಡಿಸಿದ್ದಾರೆ. ಇದು ಈಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯೂ ಆಗಿದೆ.ಇದನ್ನೂ ಓದಿ: ಮಾರ್ಚ್ 15 ರೊಳಗೆ ಭಾರತೀಯ ಸೇನೆ ವಾಪಸ್ ಗೆ ಮಾಲ್ಡೀವ್ಸ್ ಅಧ್ಯಕ್ಷರ ಕೋರಿಕೆ!ಪ್ರಧಾನಿ ಮೋದಿ ಲಕ್ಷದ್ವೀಪ ಭೇಟಿ ಬಳಿಕ ರಾಜತಾಂತ್ರಿಕ ಬಿಕ್ಕಟ್ಟು ಉಲ್ಬಣ ಕೆಲ ದಿನಗಳ ಹಿಂದಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರು ಲಕ್ಷದ್ವೀಪಕ್ಕೆ ತೆರಳಿ, ಕಡಲ ತೀರದಲ್ಲಿ ತೆಗೆಸಿಕೊಂಡ ಫೋಟೊಗಳನ್ನು ಶೇರ್‌ ಮಾಡಿದ್ದರು. ಲಕ್ಷದ್ವೀಪ ಪ್ರವಾಸ ಕೈಗೊಳ್ಳಿ ಎಂದು ಜನರನ್ನು ಕೋರಿದ್ದರು. ಇದರಿಂದ ಕೆರಳಿದ್ದ ಮಾಲ್ಡೀವ್ಸ್‌ನ ಮೂವರು ಸಚಿವರು ನರೇಂದ್ರ ಮೋದಿ ಹಾಗೂ ಭಾರತದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದರು. ಆದರೆ, ಭಾರತದಲ್ಲಿ ಬಾಯ್ಕಾಟ್‌ ಮಾಲ್ಡೀವ್ಸ್‌ ಎಂಬ ಅಭಿಯಾನ ಆರಂಭವಾಗಿದ್ದರೆ ಜತೆಗೆ ಸಾವಿರಾರು ಜನ ಮಾಲ್ಡೀವ್ಸ್‌ ಪ್ರವಾಸವನ್ನು ರದ್ದುಗೊಳಿಸಿದ್ದರು. ಇದರಿಂದ ಮಾಲ್ಡೀವ್ಸ್‌ಗೆ ತೀವ್ರ ಹಿನ್ನಡೆಯಾಗಿತ್ತು. ಇಷ್ಟಾದರೂ, ಭಾರತದ ಮೇಲಿನ ಅಸಮಾಧಾನದಿಂದಾಗಿ ಮೊಹಮ್ಮದ್‌ ಮುಯಿಜು ಸರ್ಕಾರವು ಭಾರತದ ವಿಮಾನದಲ್ಲಿ ಏರ್‌ಲಿಫ್ಟ್‌ ಮಾಡಲು ಅನುಮತಿ ನೀಡಿಲ್ಲ ಎಂದು ತಿಳಿದುಬಂದಿದೆ.