ಕೇಂದ್ರ ಬಜೆಟ್ ನಲ್ಲಿ ತಮಿಳುನಾಡು ನಿರ್ಲಕ್ಷ್ಯ: ನೀತಿ ಆಯೋಗ ಸಭೆ ಬಹಿಷ್ಕರಿಸಿದ ಸ್ಟಾಲಿನ್ 'ಬಜೆಟ್‌ನಲ್ಲಿ ಕೇಂದ್ರ ಸರ್ಕಾರ ತಮಿಳುನಾಡನ್ನು ನಿರ್ಲಕ್ಷಿಸಿರುವುದರಿಂದ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯನ್ನು ಬಹಿಷ್ಕರಿಸುತ್ತೇನೆ' ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಜುಲೈ 27 ರಂದು ನಡೆಯಲಿರುವ ನೀತಿ ಆಯೋಗ ಸಭೆಯನ್ನು ಬಹಿಷ್ಕರಿಸುವ ನಿರ್ಧಾರವನ್ನು ಘೋಷಿಸಿದ್ದಾರೆ. 2024-25 ರ ಕೇಂದ್ರ ಬಜೆಟ್‌ನಲ್ಲಿ ಕೇಂದ್ರ ಸರ್ಕಾರ ತಮಿಳುನಾಡನ್ನು ನಿರ್ಲಕ್ಷಿಸಿದೆ ಎಂಬ ಕಾರಣದಿಂದ ಪ್ರತಿಕ್ರಿಯೆಯಾಗಿ ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.ಬಜೆಟ್‌ನಲ್ಲಿ ಕೇಂದ್ರ ಸರ್ಕಾರ ತಮಿಳುನಾಡನ್ನು ಬಹಿಷ್ಕರಿಸಿರುವುದರಿಂದ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯನ್ನು ಬಹಿಷ್ಕರಿಸುವುದಾಗಿ ಸ್ಟಾಲಿನ್ ಹೇಳಿದ್ದಾರೆ.ಈ ನಿಲುವನ್ನು ಕಾಂಗ್ರೆಸ್-ಆಡಳಿತವಿರುವ ಇತರ ರಾಜ್ಯಗಳ ಮುಖ್ಯಮಂತ್ರಿಗಳು ಬೆಂಬಲಿಸಿದ್ದಾರೆ, ಕೇಂದ್ರ ಬಜೆಟ್‌ನಲ್ಲಿ ತಮಿಳುನಾಡನ್ನು ನಿರ್ಲಕ್ಷಿಸಿರುವ ಬಗ್ಗೆ ವ್ಯಾಪಕವಾದ ಟೀಕೆಗಳು ಬರುತ್ತಿವೆ.