ಮೋದಿ ಧ್ಯಾನಕ್ಕೆ ತಗುಲಿದ ವೆಚ್ಚ ವಸೂಲಿ ಮಾಡುವಂತೆ ಹೈಕೋರ್ಟ್ ಮೊರೆ ಹೋಗಲು ತಮಿಳುನಾಡು ಕಾಂಗ್ರೆಸ್ ನಿರ್ಧಾರ ಲೋಕಸಭೆ ಚುನಾವಣೆಯ ಪ್ರಚಾರದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಕನ್ಯಾಕುಮಾರಿಯಲ್ಲಿ ಎರಡು ದಿನಗಳ ಕಾಲ ಧ್ಯಾನ ಮಾಡಲು ಆರಂಭಿಸಿದ್ದಾರೆ. ಚೆನ್ನೈ: ಲೋಕಸಭೆ ಚುನಾವಣೆಯ ಪ್ರಚಾರದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಕನ್ಯಾಕುಮಾರಿಯಲ್ಲಿ ಎರಡು ದಿನಗಳ ಕಾಲ ಧ್ಯಾನ ಮಾಡಲು ಆರಂಭಿಸಿದ್ದಾರೆ.ಪ್ರಧಾನಿ ಮೋದಿ ಅವರು ಇಂದು ವಿವೇಕಾನಂದ ರಾಕ್ ಸ್ಮಾರಕದಲ್ಲಿ ಸೂರ್ಯೋದಯದ ಸಮಯದಲ್ಲಿ 'ಸೂರ್ಯ ಅರ್ಘ್ಯ' ಮಾಡಿದ ನಂತರ ತಮ್ಮ ಎರಡನೇ ಮತ್ತು ಅಂತಿಮ ದಿನದ ಧ್ಯಾನವನ್ನು ಪ್ರಾರಂಭಿಸಿದ್ದು, ಇದನ್ನು ವಿರೋಧಿಸಿ ತಮಿಳುನಾಡು ಕಾಂಗ್ರೆಸ್ ಸಮಿತಿ(ಟಿಎನ್‌ಸಿಸಿ) ಸದಸ್ಯ ಎಪಿ ಸೂರ್ಯಪ್ರಕಾಶ್ ನೇತೃತ್ವದ ವಕೀಲರ ತಂಡ ಮದ್ರಾಸ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.ಮೋದಿಯವರು, ಭಾರತೀಯ ಜನತಾ ಪಕ್ಷಕ್ಕೆ(ಬಿಜೆಪಿ) ಮತಗಳನ್ನು ಸೆಳೆಯುವ ಪ್ರಯತ್ನ ಮಾಡುತ್ತಿದ್ದು, ಮೇ 30 ರಂದು ಪ್ರಾರಂಭವಾದ ಅವರ ಧ್ಯಾನವನ್ನು ದೂರದರ್ಶನದಲ್ಲಿ ಮತ್ತು ಇತರೆ ಖಾಸಗಿ ವಾಹಿನಿಗಳಲ್ಲಿ ವ್ಯಾಪಕವಾಗಿ ಪ್ರಸಾರ ಮಾಡಲಾಗುತ್ತಿದೆ. ಇದು ವಿರೋಧ ಪಕ್ಷಗಳಿಗೆ ಅನನುಕೂಲಕರವಾಗಿ ಕೆಲಸ ಮಾಡುತ್ತದೆ ಮತ್ತು ಅಂತಹ ಪ್ರಸಾರವು ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸುತ್ತದೆ ಎಂದು ಕಾಂಗ್ರೆಸ್ ಆರೋಪಿಸಿದೆ.ಆದಾಗ್ಯೂ, ಸೂರ್ಯಪ್ರಕಾಶ್ ಅವರು ಪ್ರಸ್ತುತ ಮಂಗಳೂರಿನಲ್ಲಿದ್ದಾರೆ ಮತ್ತು ಅವರ ಜೂನಿಯರ್ ಅರ್ಜಿಯನ್ನು ಸಲ್ಲಿಸುತ್ತಿದ್ದಾರೆ ಎಂದು ಆನ್‌ಲೈನ್‌ಗೆ ತಿಳಿಸಿದ್ದಾರೆ. ಆದರೆ ಅವರು ಚೆನ್ನೈಗೆ ಮರಳಿದ ನಂತರ ಮೋದಿಯವರ ಕನ್ಯಾಕುಮಾರಿ ಭೇಟಿಗೆ ರಾಜ್ಯ ಸರ್ಕಾರ ಖರ್ಚು ಮಾಡಿದ ಎಲ್ಲಾ ವೆಚ್ಚವನ್ನು ವಸೂಲಿ ಮಾಡಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಹೈಕೋರ್ಟ್ ಗೆ ಹೊಸ ಅರ್ಜಿ ಸಲ್ಲಿಸುವುದಾಗಿ ಹೇಳಿದ್ದಾರೆ."ಪ್ರಧಾನಿ ಮೋದಿ ಅವರು ವೈಯಕ್ತಿಕ ಭೇಟಿಗಾಗಿ ಕನ್ಯಾಕುಮಾರಿಗೆ ಬಂದಿದ್ದಾರೆ. ಮೋದಿಯವರ ಈ ಭೇಟಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಭಾರಿ ಮೊತ್ತವನ್ನು ಖರ್ಚು ಮಾಡಿದೆ. ಆ ವೆಚ್ಚವನ್ನು ಬಿಜೆಪಿಯಿಂದ ವಸೂಲಿ ಮಾಡಬೇಕಾಗಿದೆ" ಎಂದು ಸೂರ್ಯಪ್ರಕಾಶ್ ಹೇಳಿದ್ದಾರೆ.