: ಬಿಹಾರದಲ್ಲಿ ಸಿಡಿಲಿಗೆ 21 ಮಂದಿ ಸಾವು ಬಿಹಾರದ ಮಧುಬನಿಯಲ್ಲಿ ಗರಿಷ್ಠ ಆರು ಮಂದಿ ಸಾವನ್ನಪ್ಪಿದ್ದು, ಔರಂಗಾಬಾದ್‌ನಲ್ಲಿ ನಾಲ್ಕು, ರಾಜಧಾನಿ ಪಾಟ್ನಾದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಪಾಟ್ನಾ: ಬಿಹಾರದಲ್ಲಿ ಸಿಡಿಲಿಗೆ 21 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.ಬಿಹಾರ ಮುಖ್ಯಮಂತ್ರಿ ಕಚೇರಿ ಶುಕ್ರವಾರ ನೀಡಿರುವ ಮಾಹಿತಿ ಅನ್ವಯ ಕಳೆದ 24 ಗಂಟೆಗಳಲ್ಲಿ ಬಿಹಾರದಾದ್ಯಂತ ಸಿಡಿಲು ಬಡಿತ-ಸಂಬಂಧಿತ ಘಟನೆಗಳಲ್ಲಿ ಒಟ್ಟು 21 ಜನರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.ಬಿಹಾರದ ಮಧುಬನಿಯಲ್ಲಿ ಗರಿಷ್ಠ ಆರು ಮಂದಿ ಸಾವನ್ನಪ್ಪಿದ್ದು, ಔರಂಗಾಬಾದ್‌ನಲ್ಲಿ ನಾಲ್ಕು, ರಾಜಧಾನಿ ಪಾಟ್ನಾದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.ಅಲ್ಲದೆ ರೋಹ್ತಾಸ್, ಭೋಜ್‌ಪುರ, ಕೈಮೂರ್, ಸರನ್, ಜೆಹಾನಾಬಾದ್, ಗೋಪಾಲ್‌ಗಂಜ್, ಸುಪೌಲ್, ಲಖಿಸಾರೈ ಮತ್ತು ಮಾಧೇಪುರ ಜಿಲ್ಲೆಗಳಲ್ಲಿ ತಲಾ ಒಬ್ಬರು ಸಿಡಿಲು ಬಡಿತಕ್ಕೆ ಒಳಗಾಗಿ ಸಾವನ್ನಪ್ಪಿದ್ದಾರೆ ಎಂದು ಸಿಎಂಒ ಹೇಳಿಕೆಯಲ್ಲಿ ತಿಳಿಸಿದೆ.ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಮೃತರಿಗೆ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಕ್ಕೆ ತಲಾ 4 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.ಇದೇ ವೇಳೆ ಪ್ರತಿಕೂಲ ಹವಾಮಾನದ ಸಂದರ್ಭದಲ್ಲಿ ಎಲ್ಲಾ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ಮುಖ್ಯಮಂತ್ರಿ ಕಚೇರಿ ಜನರಿಗೆ ಮನವಿ ಮಾಡಿದೆ.ಅಲ್ಲದೆ ಅಗತ್ಯವಿಲ್ಲದಿದ್ದರೆ ಹೊರಗಡೆ ಹೋಗುವುದನ್ನು ತಪ್ಪಿಸಿ ಮತ್ತು ಕಾಲಕಾಲಕ್ಕೆ ವಿಪತ್ತು ನಿರ್ವಹಣಾ ಇಲಾಖೆ ನೀಡುವ ಸಲಹೆಗಳನ್ನು ಅನುಸರಿಸಿ ಎಂದು ಕರೆ ನೀಡಿದೆ.वज्रपात से सीवान में 2, सुपौल में 1 और रोहतास में 1 व्यक्ति की मृत्यु दुःखद। शोक संतप्त परिजनों के प्रति गहरी संवेदना है। मृतकों के परिजनों को 4-4 लाख रू॰ अनुग्रह अनुदान दिया जाएगा। लोगों से अपील है कि खराब मौसम में पूरी सतर्कता बरतें। आपदा प्रबंधन विभाग द्वारा समय-समय पर जारी…ಕಳೆದ ಕೆಲವು ವಾರಗಳಿಂದ ಬಿಹಾರದಲ್ಲಿ ಮಳೆ ಮತ್ತು ಭಾರಿ ಗುಡುಗು ಸಹಿತ ಮಳೆಯಾಗುತ್ತಿದ್ದು, ಈ ತಿಂಗಳ ಆರಂಭದಿಂದ ಸುಮಾರು 70 ಜನರು ಸಿಡಿಲು-ಸಂಬಂಧಿತ ಘಟನೆಗಳಿಗೆ ಬಲಿಯಾಗಿದ್ದಾರೆ.