ಉಗ್ರ ದಾಳಿಯಲ್ಲಿ ಯೋಧರ ಸಾವು: ಬಿಜೆಪಿಯ ತಪ್ಪು ನೀತಿಗಳ ಭಾರವನ್ನು ನಮ್ಮ ಯೋಧರು ಹೊತ್ತಿದ್ದಾರೆ- ರಾಹುಲ್ ಗಾಂಧಿ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಭಯೋತ್ಪಾದಕ ಎನ್‌ಕೌಂಟರ್‌ನಲ್ಲಿ ನಮ್ಮ ಸೈನಿಕರು ಹುತಾತ್ಮರಾಗಿದ್ದಾರೆ. ಹುತಾತ್ಮರಿಗೆ ನನ್ನ ವಿನಮ್ರ ಶ್ರದ್ಧಾಂಜಲಿ ಸಲ್ಲಿಸುತ್ತಾ, ಮೃತರ ಕುಟುಂಬಗಳಿಗೆ ನನ್ನ ಆಳವಾದ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಭಯೋತ್ಪಾದಕರೊಂದಿಗೆ ರಾತ್ರಿಯಿಡೀ ನಡೆದ ಎನ್‌ಕೌಂಟರ್‌ನಲ್ಲಿ ಗಂಭೀರವಾಗಿ ಗಾಯಗೊಂಡ ಅಧಿಕಾರಿ ಸೇರಿದಂತೆ ನಾಲ್ವರು ಸೇನಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿಯನ್ನು ಗುರಿಯಾಗಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯುತ್ತಿರುವ ಈ ಘಟನೆಗಳಿಗೆ ಬಿಜೆಪಿಯ ನೀತಿಗಳೇ ಹೊಣೆ ಎಂದು ರಾಹುಲ್ ಗಾಂಧಿ ನೇರವಾಗಿ ಹೇಳಿದ್ದಾರೆ.ಇಂದು ಮತ್ತೆ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಭಯೋತ್ಪಾದಕ ಎನ್‌ಕೌಂಟರ್‌ನಲ್ಲಿ ನಮ್ಮ ಸೈನಿಕರು ಹುತಾತ್ಮರಾಗಿದ್ದಾರೆ. ಹುತಾತ್ಮರಿಗೆ ನನ್ನ ವಿನಮ್ರ ಶ್ರದ್ಧಾಂಜಲಿ ಸಲ್ಲಿಸುತ್ತಾ, ಮೃತರ ಕುಟುಂಬಗಳಿಗೆ ನನ್ನ ಆಳವಾದ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಒಂದರ ಹಿಂದೆ ಒಂದರಂತೆ ಇಂತಹ ಭಯಾನಕ ಘಟನೆಗಳು ಅತ್ಯಂತ ದುಃಖಕರ ಮತ್ತು ಆತಂಕಕಾರಿ. ಈ ನಿರಂತರ ಭಯೋತ್ಪಾದಕ ದಾಳಿಗಳು ಜಮ್ಮು ಮತ್ತು ಕಾಶ್ಮೀರದ ಹದಗೆಟ್ಟ ಸ್ಥಿತಿಯನ್ನು ಬಹಿರಂಗಪಡಿಸುತ್ತಿವೆ. ಬಿಜೆಪಿಯ ತಪ್ಪು ನೀತಿಗಳ ಪರಿಣಾಮ ನಮ್ಮ ಸೈನಿಕರು ಮತ್ತು ಅವರ ಕುಟುಂಬಗಳು ಅನುಭವಿಸುತ್ತಿವೆ ಎಂದು ಟ್ವೀಟ್ ಮಾಡಿದ್ದಾರೆ.ಪದೇ ಪದೇ ಭದ್ರತಾ ಲೋಪಗಳಿಗೆ ಸರಕಾರವೇ ಸಂಪೂರ್ಣ ಹೊಣೆ ಹೊರಬೇಕು ಮತ್ತು ದೇಶದ ಮತ್ತು ಸೈನಿಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂಬುದು ಪ್ರತಿಯೊಬ್ಬ ದೇಶಭಕ್ತ ಭಾರತೀಯನ ಆಗ್ರಹವಾಗಿದೆ ಎಂದು ರಾಹುಲ್ ಗಾಂಧಿ ಹೇಳಿದರು. ಈ ದುಃಖದ ಸಮಯದಲ್ಲಿ, ಇಡೀ ದೇಶವು ಭಯೋತ್ಪಾದನೆಯ ವಿರುದ್ಧ ಒಗ್ಗಟ್ಟಾಗಿ ನಿಂತಿದೆ ಎಂದರು.ಈ ವಿಚಾರವಾಗಿ ರಾಹುಲ್ ಗಾಂಧಿಗೆ ಬಿಜೆಪಿ ತಿರುಗೇಟು ನೀಡಿದೆ. ಇದು ರಾಜಕೀಯ ಮಾಡುವ ಸಮಯವಲ್ಲ ಎಂದು ಬಿಜೆಪಿ ಹೇಳಿದೆ. ಮತ್ತೊಂದೆಡೆ, ಕಳೆದ ಎರಡು ತಿಂಗಳ ಅವಧಿಯಲ್ಲಿ ಸೇನೆಯ ಮೇಲೆ 11 ದಾಳಿಗಳು ನಡೆದಿವೆ. ಈ ಅವಧಿಯಲ್ಲಿ ನಮ್ಮ 12 ಯೋಧರು ಹುತಾತ್ಮರಾಗಿದ್ದಾರೆ. ಈ ದಾಳಿಗಳು ಪೂಂಚ್, ರಾಜೌರಿ, ರಿಯಾಸಿ, ಉಧಂಪುರ, ಕಥುವಾದಿಂದ ದೋಡಾದವರೆಗೆ ನಡೆದಿವೆ.आज जम्मू कश्मीर में फिर से एक आतंकी मुठभेड़ में हमारे जवान शहीद हो गए। शहीदों को विनम्र श्रद्धांजलि अर्पित करते हुए शोक संतप्त परिजनों को गहरी संवेदनाएं व्यक्त करता हूं। एक के बाद एक ऐसी भयानक घटनाएं बेहद दुखद और चिंताजनक है। लगातार हो रहे ये आतंकी हमले जम्मू कश्मीर की जर्जर…