ಹತ್ರಾಸ್‌ ಕಾಲ್ತುಳಿತದಲ್ಲಿ 100ಕ್ಕೂ ಹೆಚ್ಚು ಮಂದಿ ಸಾವು: ಮೃತರ ಕುಟುಂಬಕ್ಕೆ ಮೋದಿ, ಸಿಎಂ ಯೋಗಿ ತಲಾ 2 ಲಕ್ಷ ರೂ ಪರಿಹಾರ ಘೋಷಣೆ ಮಾಧ್ಯಮ ವರದಿ ಪ್ರಕಾರ, ಹತ್ರಾಸ್ ಕಾಲ್ತುಳಿತದಲ್ಲಿ ಇಲ್ಲಿಯವರೆಗೂ ಸುಮಾರು 130 ಮಂದಿ ಸಾವನ್ನಪ್ಪಿದ್ದು 150 ಕ್ಕೂ ಹೆಚ್ಚು ಭಕ್ತರು ಗಾಯಗೊಂಡಿದ್ದಾರೆ. ಹತ್ರಾಸ್ ಜಿಲ್ಲೆಯ ಮುಘಲ್‌ಗರ್ಹಿ ಗ್ರಾಮದಲ್ಲಿ ಭೋಲೆ ಬಾಬಾ ಸತ್ಸಂಗ ಕಾರ್ಯಕ್ರಮದ ವೇಳೆ ನೂಕುನುಗ್ಗಲಿನಿಂದ ಸಂಭವಿಸಿದ ಕಾಲ್ತುಳಿತದಲ್ಲಿ ಮೃತರ ಸಂಖ್ಯೆ 130ಕ್ಕೆ ಏರಿಕೆಯಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಇನ್ನು 150ಕ್ಕೂ ಹೆಚ್ಚು ಮಂದಿ ಈ ಭೀಕರ ಕಾಲ್ತುಳಿತದಲ್ಲಿ ಗಾಯಗೊಂಡಿದ್ದು ಅವರನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿಲಿ ಚಿಕಿತ್ಸೆ ನೀಡಲಾಗುತ್ತಿದೆ.ಮಾಧ್ಯಮ ವರದಿ ಪ್ರಕಾರ, ಹತ್ರಾಸ್ ಕಾಲ್ತುಳಿತದಲ್ಲಿ ಇಲ್ಲಿಯವರೆಗೂ ಸುಮಾರು 130 ಮಂದಿ ಸಾವನ್ನಪ್ಪಿದ್ದು 150 ಕ್ಕೂ ಹೆಚ್ಚು ಭಕ್ತರು ಗಾಯಗೊಂಡಿದ್ದಾರೆ. ಈ ಪೈಕಿ ಹಲವರ ಸ್ಥಿತಿ ಚಿಂತಾಜನಕವಾಗಿದ್ದು ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳಿವೆ. ಕಾಲ್ತುಳಿತದಲ್ಲಿ ಮೃತಪಟ್ಟವರ ಪೈಕಿ ಹೆಚ್ಚಿನವರು ಹತ್ರಾಸ್ ಮತ್ತು ಇಟಾಹ್ ನಿವಾಸಿಗಳು ಎಂದು ಹೇಳಲಾಗಿದೆ.ಭೋಲೆ ಬಾಬಾ ಪ್ರವಚನ ಕೇಳಲು ಸೇರಿದ್ದ ಭಕ್ತರುಸಂತ ಭೋಲೆ ಬಾಬಾ ಪ್ರವಚನ ಕೇಳಲು ಹೆಚ್ಚಿನ ಸಂಖ್ಯೆಯ ಜನರು ಹತ್ರಾಸ್ ಇಟಾಹ್ ಗಡಿಯ ಸಮೀಪವಿರುವ ರತಿಭಾನ್‌ಪುರವನ್ನು ತಲುಪಿದ್ದರು. ಈ ವೇಳೆ ಕಾಲ್ತುಳಿತ ಸಂಭವಿಸಿತ್ತು. ಪೊಲೀಸ್ ಆಡಳಿತ ಮತ್ತು ಆಂಬುಲೆನ್ಸ್ ಸ್ಥಳಕ್ಕೆ ತಲುಪುವಲ್ಲಿ ಸಾಕಷ್ಟು ವಿಳಂಬವಾಯಿತು. ಸ್ಥಳೀಯರು ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗಳು ಮತ್ತು ಇಟಾಹ್ ಆಸ್ಪತ್ರೆಗಳಿಗೆ ಕಳುಹಿಸಿದ್ದಾರೆ. 27 ಮೃತದೇಹಗಳನ್ನು ಇಟಾಹ್ ಸರ್ಕಾರಿ ಆಸ್ಪತ್ರೆಗೆ ತರಲಾಗಿದೆ.ಮೃತರ ಕುಟುಂಬಕ್ಕೆ ಮೋದಿ ಸಂತಾಪ; 2 ಲಕ್ಷ ಪರಿಹಾರ ಘೋಷಣೆಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತ ಕುರಿತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೊಂದಿಗೆ ಮಾತನಾಡಿದೆ. ಯುಪಿ ಸರ್ಕಾರವು ಎಲ್ಲಾ ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ನೆರವು ನೀಡುವಲ್ಲಿ ತೊಡಗಿದೆ. ಇದರಲ್ಲಿ ತಮ್ಮ ಆತ್ಮೀಯರನ್ನು ಕಳೆದುಕೊಂಡವರಿಗೆ ನನ್ನ ಸಹಾನುಭೂತಿ ಇದೆ. ಇನ್ನು ಎಲ್ಲಾ ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದು ಪ್ರಧಾನಿ ಮೋದಿ ಎಕ್ಸ್ ನಲ್ಲಿ ಟ್ವೀಟ್ ಮಾಡಿದ್ದಾರೆ. ಅಲ್ಲದೆ ಮೃತರ ಕುಟಂಬಗಳಿಗೆ ತಲಾ 2 ಲಕ್ಷ ಪರಿಹಾರ ಹಾಗೂ ಗಾಯಗೊಂಡವರಿಗೆ 50 ಸಾವಿರ ಪರಿಹಾರ ಘೋಷಿಸಿದ್ದಾರೆ.उत्तर प्रदेश के हाथरस में हुए दुखद हादसे को लेकर मुख्यमंत्री योगी आदित्यनाथ जी से बात की। यूपी सरकार सभी पीड़ितों की हरसंभव सहायता में जुटी हुई है। मेरी संवेदनाएं उन लोगों के साथ हैं, जिन्होंने इसमें अपने प्रियजनों को खोया है। इसके साथ ही मैं सभी घायलों के जल्द से जल्द स्वस्थ…2 ಲಕ್ಷ ಪರಿಹಾರ ಘೋಷಿಸಿದ ಸಿಎಂ ಯೋಗಿಹತ್ರಾಸ್ ಜಿಲ್ಲೆಯಲ್ಲಿ ಸಂಭವಿಸಿದ ದುರದೃಷ್ಟಕರ ಅಪಘಾತದಲ್ಲಿ ಜೀವಹಾನಿ ಅತ್ಯಂತ ದುಃಖಕರ ಮತ್ತು ಹೃದಯ ವಿದ್ರಾವಕವಾಗಿದೆ. ಆತ್ಮೀಯರನ್ನು ಕಳೆದುಕೊಂಡ ಕುಟುಂಬಗಳಿಗೆ ನನ್ನ ಸಂತಾಪ. ಯುದ್ಧೋಪಾದಿಯಲ್ಲಿ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಸಿ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಟ್ವೀಟ್ ಮಾಡಿದ್ದಾರೆ. ಅಲ್ಲದೆ ಮೃತರ ಕುಟಂಬಗಳಿಗೆ ತಲಾ 2 ಲಕ್ಷ ಪರಿಹಾರ ಹಾಗೂ ಗಾಯಗೊಂಡವರಿಗೆ 50 ಸಾವಿರ ಪರಿಹಾರ ಘೋಷಿಸಿದ್ದಾರೆ.जनपद हाथरस की दुर्भाग्यपूर्ण दुर्घटना में हुई जनहानि अत्यंत दुःखद एवं हृदय विदारक है। मेरी संवेदनाएं शोक संतप्त परिजनों के साथ हैं। संबंधित अधिकारियों को राहत एवं बचाव कार्यों के युद्ध स्तर पर संचालन और घायलों के समुचित उपचार हेतु निर्देश दिए हैं। उत्तर प्रदेश सरकार में मा.…