ದಕ್ಷಿಣ ಆಫ್ರಿಕಾ, ಆಸ್ಚ್ರೇಲಿಯಾ ಸರಣಿಗೂ ಹಾರ್ದಿಕ್ ಪಾಂಡ್ಯ ಅಲಭ್ಯ: ವರದಿ, ಭಾರತ ತಂಡಕ್ಕೆ ಪಾಂಡ್ಯ ಭಾವುಕ ಪತ್ರ ಐಸಿಸಿ ಕ್ರಿಕೆಟ್ ವಿಶ್ವಕಪ್ ಟೂರ್ನಿಯ ಬಾಂಗ್ಲಾದೇಶದ ವಿರುದ್ಧದ ಪಂದ್ಯದಲ್ಲಿ ಗಾಯಗೊಂಡಿದ್ದ ಭಾರತ ತಂಡದ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಇದೀಗ ದಕ್ಷಿಣ ಆಫ್ರಿಕಾ ಮತ್ತು ಆಸ್ಚ್ರೇಲಿಯಾ ವಿರುದ್ಧ ಸರಣಿಗೂ ಅಲಭ್ಯರಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ನವದೆಹಲಿ: ಐಸಿಸಿ ಕ್ರಿಕೆಟ್ ವಿಶ್ವಕಪ್ ಟೂರ್ನಿಯ ಬಾಂಗ್ಲಾದೇಶದ ವಿರುದ್ಧದ ಪಂದ್ಯದಲ್ಲಿ ಗಾಯಗೊಂಡಿದ್ದ ಭಾರತ ತಂಡದ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಇದೀಗ ದಕ್ಷಿಣ ಆಫ್ರಿಕಾ ಮತ್ತು ಆಸ್ಚ್ರೇಲಿಯಾ ವಿರುದ್ಧ ಸರಣಿಗೂ ಅಲಭ್ಯರಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.ವಿಶ್ವಕಪ್ ಟೂರ್ನಿಯ ಲೀಗ್ ಪಂದ್ಯದ ವೇಳೆ ಗಾಯಗೊಂಡು ಸಂಪೂರ್ಣವಾಗಿ ಟೂರ್ನಿಯಿಂದ ಹೊರಬಿದ್ದಿದ್ದ ಸ್ಟಾರ್‌ ಆಲ್ರೌಂಡರ್‌ ಹಾರ್ದಿಕ್‌ ಪಾಂಡ್ಯ( ) ಅವರು, ಮುಂಬರುವ ಆಸ್ಟ್ರೇಲಿಯಾ ( ) ಮತ್ತು ದಕ್ಷಿಣ ಆಫ್ರಿಕಾ ( ) ವಿರುದ್ಧದ ಸರಣಿಗೂ ಅಲಭ್ಯರಾಗಲಿದ್ದಾರೆ ಎಂದು ವರದಿಯಾಗಿದೆ.ಇದನ್ನೂ ಓದಿ: 2023: ದಕ್ಷಿಣ ಆಫ್ರಿಕಾ ವಿರುದ್ಧ ಆಸ್ಟ್ರೇಲಿಯಾಗೆ ರೋಚಕ ಜಯ, ಫೈನಲ್‌ನಲ್ಲಿ ಭಾರತ-ಆಸೀಸ್ ಮುಖಾಮುಖಿ!ಬೌಂಡರಿ ತಡೆಯುವ ಯತ್ನದಲ್ಲಿ ಗಾಯಗೊಂಡಿದ್ದ ಪಾಂಡ್ಯ ಬಾಂಗ್ಲಾದೇಶ ವಿರುದ್ಧ ಅಕ್ಟೋಬರ್ 19ರಂದು ಪುಣೆಯಲ್ಲಿ ನಡೆದಿದ್ದ ಪಂದ್ಯದ 9ನೇ ಓವರ್ ಎಸೆಯಲು ಬಂದ ಹಾರ್ದಿಕ್ ಪಾಂಡ್ಯ ಅವರು ಲಿಟನ್ ದಾಸ್ ಬಾರಿಸಿದ ಬೌಂಡರಿ ತಡೆಯುವ ಯತ್ನದಲ್ಲಿ ಸ್ಲಿಪ್ ಆಗಿ ಕೆಳಗೆ ಬಿದ್ದು ಪಾದದ ಗಾಯಕ್ಕೆ ತುತ್ತಾಗಿದ್ದರು. ಬಳಿಕ ನೋವಿನಿಂದಾಗಿ ಮೈದಾನ ತೊರೆದಿದ್ದರು. ಪಾಂಡ್ಯ ಅವರ ಉಳಿದ ಮೂರು ಎಸೆತಗಳನ್ನು ವಿರಾಟ್ ಕೊಹ್ಲಿ ಅವರು ಪೂರ್ಣಗೊಳಿಸಿದ್ದರು. ಗಾಯಗೊಂಡು ಮೈದಾನದಿಂದ ಹೊರ ನಡೆದ ಪಾಂಡ್ಯ ಸಂಪೂರ್ಣವಾಗಿ ಪಂದ್ಯದಿಂದ ಹೊರಗುಳಿದಿದ್ದರು. ಅವರ ಸ್ಥಾನದಲ್ಲಿ ಸೂರ್ಯಕುಮಾರ್ ಅವರು ಬದಲಿ ಆಟಗಾರನಾಗಿ ಫೀಲ್ಡಿಂಗ್ ನಡೆಸಿದ್ದರು. ಬಳಿಕ ಮೂರು ಪಂದ್ಯಗಳಿಂದ ಹೊರಗುಳಿದು ಚಿಕಿತ್ಸೆ ಪಡೆದರೂ ಗಾಯದಿಂದ ಚೇತರಿಕೆ ಕಾಣದ ಕಾರಣ ಅಂತಿಮವಾಗಿ ವಿಶ್ವಕಪ್‌ನಿಂದಲೇ ಹೊರಬಿದ್ದರು. ಅವರ ಸ್ಥಾನಕ್ಕೆ ಬದಲಿ ಆಟಗಾರನಾಗಿ ಕನ್ನಡಿಗ ಪ್ರಸಿದ್ಧ್ ಕೃಷ್ಣ ( ) ತಂಡ ಸೇರಿದ್ದರು. . ' , , . , , . ' '… ../b05BKW0FgLಟೀಂ ಇಂಡಿಯಾಗೆ ಪಾಂಡ್ಯ ಭಾವುಕ ಪತ್ರ ಇನ್ನು ವಿಶ್ವಕಪ್ ಟೂರ್ನಿಯ ಐತಿಹಾಸಿಕ ಘಟ್ಟದಲ್ಲಿರುವ ಟೀಂ ಇಂಡಿಯಾಗೆ ಹಾರ್ದಿಕ್ ಪಾಂಡ್ಯ ಪತ್ರವೊಂದು ಬರೆದಿದ್ದು, ಟ್ವಿಟರ್ ನಲ್ಲಿ ಈ ಪತ್ರವನ್ನು ಪೋಸ್ಟ್ ಮಾಡಿದ್ದಾರೆ. “ವಿಶ್ವಕಪ್‌ನ ಉಳಿದ ಭಾಗವನ್ನು ನಾನು ಕಳೆದುಕೊಳ್ಳುತ್ತೇನೆ ಎಂಬ ವಿಚಾರವನ್ನು ಅರಗಿಸಿಕೊಳ್ಳಲು ಕಷ್ಟವಾಗುತ್ತಿದೆ. ಆದರೂ ನಾನು ನಮ್ಮ ತಂಡದೊಂದಿಗೆ ಇದ್ದು ಅವರನ್ನು ಹುರಿದುಂಬಿಸುತ್ತೇನೆ. ನನಗೆ ಬೆಂಬಲ ನೀಡಿದ್ದಕ್ಕೆ ಹಾಗೂ ನೀಡುತ್ತಿರುವುದಕ್ಕೆ ಧನ್ಯವಾದಗಳು. ನಮ್ಮ ತಂಡ ವಿಶ್ವಕಪ್ ಎತ್ತಿ ಹಿಡಿಯುತ್ತದೆ ಎಂಬ ವಿಶ್ವಾಸ ನನಗಿದೆ” ಎಂದು ಟ್ವಿಟರ್ ನಲ್ಲಿ ಬರೆದಿದ್ದರು.ಇದನ್ನೂ ಓದಿ: ವಿಶ್ವಕಪ್ ಕ್ರಿಕೆಟ್: ಭಾರತೀಯ ಸ್ಪಿನ್ನರ್ ಗಳಿಗೆ ನೆರವಾಗುವಂತೆ ಪಿಚ್ ಬದಲಾಯಿಸಲಾಗುತ್ತಿದೆಯೇ? ಗವಾಸ್ಕರ್ ಹೇಳಿದ್ದು ಹೀಗೆ...ವಿಶ್ವಕಪ್ ಬೆನ್ನಲ್ಲೇ ಆಸಿಸ್-ದಕ್ಷಿಣ ಆಫ್ರಿಕಾ ವಿರುದ್ಧ ಸರಣಿ ವಿಶ್ವಕಪ್‌ ಮುಗಿದ ತಕ್ಷಣ ಭಾರತ ತಂಡ ತವರಿನಲ್ಲಿ ಆಸ್ಟ್ರೇಲಿಯಾ ವಿರುದ್ಧ 5 ಪಂದ್ಯಗಳ ಟಿ20 ಪಂದ್ಯಗಳ ಸರಣಿಯನ್ನು ಆಡಲಿದೆ. ಈ ಸರಣಿ ನವೆಂಬರ್ 22 ರಿಂದ ಡಿಸೆಂಬರ್ 3 ತನಕ ನಡೆಯಲಿದೆ. ಮೊದಲ ಪಂದ್ಯ ವಿಶಾಖಪಟ್ಟಣದಲ್ಲಿ ನಡೆಯಲಿದ್ದು, ದಕ್ಷಿಣ ಆಫ್ರಿಕಾ ವಿರುದ್ಧ ಡಿ.10ರಿಂದ ಟಿ20 ಸರಣಿ ಆರಂಭಗೊಳ್ಳಲಿದೆ. ಇದಾದ ಬಳಿಕ ಡಿ.17ರಿಂದ ಏಕದಿನ, ಡಿ.26ರಿಂದ ಟೆಸ್ಟ್ ಸರಣಿ ನಡೆಯಲಿದೆ. ಜನವರಿ 3 ತನಕ ಈ ಸರಣಿ ಸಾಗಲಿದೆ. ವಿಶ್ವಕಪ್ ಆಡಿದ ಹಲವು ಆಟಗಾರರಿಗೆ ಈ ಸರಣಿಗೆ ವಿಶ್ರಾಂತಿ ನೀಡುವ ಸಾಧ್ಯತೆಯೂ ಇದೆ. ಪ್ರಮುಖವಾಗಿ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಜಸ್ ಪ್ರೀತ್ ಬುಮ್ರಾ, ಶಮಿ, ರವೀಂದ್ರ ಜಡೇಜಾ ಅವರು ಈ ಸರಣಿಯಿಂದ ಹೊರಗುಳಿಯಬಹುದು. ಕೆ.ಎಲ್ ರಾಹುಲ್ ಅವರು ನಾಯಕತ್ವ ವಹಿಸುವ ಸಾಧ್ಯತೆ ಅಧಿಕವಾಗಿದೆ.