ಓಮಾನ್ ನಲ್ಲಿ ಭೀಕರ ರಸ್ತೆ ಅಪಘಾತ: ಬೆಳಗಾವಿ ಮೂಲದ ನಾಲ್ವರು ಸಜೀವ ದಹನ ಈ ನಾಲ್ವರು ಓಮಾನ್ಗೆ ಪ್ರವಾಸಕ್ಕೆ ತೆರಳಿದ್ದರು. ಹೈಮಾ ಎಂಬ ಪ್ರದೇಶದಲ್ಲಿ ಹೋಗುತ್ತಿದ್ದ ವೇಳೆ ಕಾರು ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿದೆ. ಬೆಳಗಾವಿ: ಓಮಾನ್ ದೇಶದ ಹೈಮಾ ಎಂಬಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ. ವಿಜಯಾ ತಹಶಿಲ್ದಾರ, ಪೂಜಾ, ಪವನ್ ಕುಮಾರ ಮತ್ತು ಆದಿಶೇಷ ಮೃತಪಟ್ಟವರಾಗಿದ್ದಾರೆ.ಈ ನಾಲ್ವರು ಓಮಾನ್ಗೆ ಪ್ರವಾಸಕ್ಕೆ ತೆರಳಿದ್ದರು. ಹೈಮಾ ಎಂಬ ಪ್ರದೇಶದಲ್ಲಿ ಹೋಗುತ್ತಿದ್ದ ವೇಳೆ ಕಾರು ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿದೆ.ಓಮಾನ್‌ನ ಹೈಮಾ ರಸ್ತೆಯಲ್ಲಿ ನಡೆದ ಅಪಘಾತದಲ್ಲಿ ಗೋಕಾಕ ನಗರದ ತಹಶೀಲ್ದಾರ ಕುಟುಂಬದ ನಾಲ್ಕು ಜನರು ಮೃತಪಟ್ಟಿರುವ ಸುದ್ದಿ ತಿಳಿದು ದುಃಖವಾಯಿತು. ಮೃತರ ಆತ್ಮಕ್ಕೆ ಭಗವಂತ ಚಿರಶಾಂತಿಯನ್ನು ನೀಡಲಿ ಮತ್ತು ಅವರ ಕುಟುಂಬದವರಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಓಂ ಶಾಂತಿ... ../atqO85lPb5ಡಿಕ್ಕಿ ರಭಸಕ್ಕೆ ಕಾರಿಗೆ ಬೆಂಕಿ ಹೊತ್ತಿಕೊಂಡು, ನಾಲ್ವರು ಸಜೀವ ದಹನವಾಗಿದ್ದಾರೆ. ಮೃತರ ಶವಗಳನ್ನು ಭಾರತಕ್ಕೆ ತರಲು ವಿದೇಶಾಂಗ ಇಲಾಖೆ ಮೂಲಕ ಸಕಲ ಪ್ರಯತ್ನಗಳನ್ನು ಮಾಡಲಾಗುತ್ತಿದೆ. ವಿದೇಶಾಂಗ ಸಚಿವ ಎಸ್ ಜೈಶಂಕರ್ ಹಾಗೂ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ಮನವಿ ಮಾಡಿದ್ದೇನೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಬಿ ಕಡಾಡಿ ತಿಳಿಸಿದ್ದಾರೆ.