ಬೆಂಗಳೂರು: ತೋಳದ ಚರ್ಮ ಮಾರಾಟಕ್ಕೆ ಯತ್ನ, ತಮಿಳುನಾಡು ವ್ಯಕ್ತಿಯ ಬಂಧನ ಬೆಂಗಳೂರಿನ ಹೊರವಲಯದಲ್ಲಿ ವ್ಯಕ್ತಿಯನ್ನು ತಡೆದ ಪರಿಶೀಲನೆ ನಡೆಸಿದಾಗ ಆತನ ಬ್ಯಾಗ್ ನಲ್ಲಿ ಎರಡು ತೋಳಗಳ ಚರ್ಮ ಇರುವುದು ಪತ್ತೆಯಾಗಿದ್ದು, ಅವುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಡಿಆರ್ ಐ ಹೇಳಿಕೆಯಲ್ಲಿ ತಿಳಿಸಿದೆ. ಬೆಂಗಳೂರು: ಇತ್ತೀಚೆಗೆ ತೋಳ ಮಾರಾಟ ಮಾಡಲು ಯತ್ನಿಸಿದ ನೆರೆಯ ತಮಿಳುನಾಡಿನ ವ್ಯಕ್ತಿಯೊಬ್ಬನನ್ನು ಡೈರೆಕ್ಟರೇಟ್ ಆಫ್ ರೆವೆನ್ಯೂ ಇಂಟೆಲಿಜೆನ್ಸ್ (ಡಿಆರ್‌ಐ) ಅಧಿಕಾರಿಗಳು ಬಂಧಿಸಿದ್ದಾರೆ.ಗುಪ್ತಚರ ಮಾಹಿತಿಯ ಆಧಾರದ ಮೇಲೆ ನಗರದ ಅಧಿಕಾರಿಗಳು ಕಣ್ಗಾವಲು ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ ಬೆಂಗಳೂರಿನ ಹೊರವಲಯದಲ್ಲಿ ವ್ಯಕ್ತಿಯನ್ನು ತಡೆದ ಪರಿಶೀಲನೆ ನಡೆಸಿದಾಗ ಆತನ ಬ್ಯಾಗ್ ನಲ್ಲಿ ಎರಡು ತೋಳಗಳ ಚರ್ಮ ಇರುವುದು ಪತ್ತೆಯಾಗಿದ್ದು, ಅವುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಡಿಆರ್ ಐ ಹೇಳಿಕೆಯಲ್ಲಿ ತಿಳಿಸಿದೆ.ವನ್ಯಜೀವಿಗಳ ರಕ್ಷಣಾ ಕಾಯ್ದೆಯಡಿ ತೋಳಗಳನ್ನು ರಕ್ಷಿಸಲಾಗುತ್ತಿದ್ದು, ಅವುಗಳ ಚರ್ಮ ಹೊಂದುವುದು, ವ್ಯಾಪಾರ ಮಾಡುವುದು ಕಾನೂನುಬಾಹಿರ ಮತ್ತು ಶಿಕ್ಷಾರ್ಹ ಅಪರಾಧವಾಗಿದೆ. ಕಾಳಸಂತೆಯಲ್ಲಿ ತೋಳಗಳ ಚರ್ಮಗಳಿಗೆ ಹೆಚ್ಚಿನ ಬೇಡಿಕೆಯಿದೆ.ವನ್ಯಜೀವಿ ಸಂರಕ್ಷಣಾ ಕಾಯ್ದೆ 1972 ರಡಿ ಚರ್ಮವನ್ನು ವಶಪಡಿಸಿಕೊಳ್ಳಲಾಗಿದ್ದು, ತಮಿಳುನಾಡು ಮೂಲದ ವ್ಯಕ್ತಿಯನ್ನು ಬಂಧಿಸಲಾಗಿದೆ. ಈ ಜಾಲದಲ್ಲಿ ಮತ್ತಷ್ಟು ಮಂದಿ ಇರುವ ಸಾಧ್ಯತೆಯಿದ್ದು, ತನಿಖೆ ನಡೆಯುತ್ತಿದೆ ಎಂದು ಮಾಹಿತಿ ನೀಡಿದೆ.