: ಬಾಳ್ಳುಪೇಟೆ, ಸಕಲೇಶಪುರ ನಿಲ್ದಾಣ ನಡುವೆ ಮತ್ತೆ ಭೂಕುಸಿತ; ರೈಲು ಸಂಚಾರ ಸ್ಥಗಿತ ಕಳೆದ ಒಂದು ವಾರದ ಹಿಂದೆ ಇದೇ ಜಾಗದಲ್ಲಿ ರೈಲ್ವೆ ಹಳಿ ಮೇಲೆ ಮಣ್ಣು ಕುಸಿದಿತ್ತು. ಮಣ್ಣು ತೆರವು ಕಾರ್ಯಾಚರಣೆ ಮುಗಿದು ರೈಲ್ವೆ ಸಂಚಾರ ಆರಂಭವಾದ ಬಳಿಕ ಇದೀಗ ಮತ್ತೆ ಮಣ್ಣು ಕುಸಿದು ಯಶವಂತಪುರ-ಕಾರವಾರ ಎಕ್ಸ್‌ಪ್ರೆಸ್‌ ರೈಲು ಕಳೆದ ಒಂದು ಗಂಟೆಯಿಂದ ಬಾಳ್ಳುಪೇಟೆ ಬಳಿ ನಿಂತುಕೊಂಡಿದೆ. ಹಾಸನ: ಸಕಲೇಶಪುರ ತಾಲ್ಲೂಕಿನ ಆಚಂಗಿ-ದೊಡ್ಡಸಾಗರ ಬಳಿ ರೈಲ್ವೆ ಹಳಿ ಮೇಲೆ ಭೂಕುಸಿತ ಉಂಟಾಗಿ ಬೆಂಗಳೂರು-ಮಂಗಳೂರು (-) ನಡುವಿನ ರೈಲುಗಳ ಸಂಚಾರ ಸ್ಥಗಿತವಾಗಿದೆ. ಯಶವಂತಪುರ-ಕಾರವಾರ ಎಕ್ಸ್‌ಪ್ರೆಸ್‌ ರೈಲು ಸಂಚಾರದಲ್ಲಿ ಇಂದು ವ್ಯತ್ಯಯವುಂಟಾಗಿದೆ.ಕಳೆದ ಒಂದು ವಾರದ ಹಿಂದೆ ಇದೇ ಜಾಗದಲ್ಲಿ ರೈಲ್ವೆ ಹಳಿ ಮೇಲೆ ಮಣ್ಣು ಕುಸಿದಿತ್ತು. ಮಣ್ಣು ತೆರವು ಕಾರ್ಯಾಚರಣೆ ಮುಗಿದು ರೈಲ್ವೆ ಸಂಚಾರ ಆರಂಭವಾದ ಬಳಿಕ ಇದೀಗ ಮತ್ತೆ ಮಣ್ಣು ಕುಸಿದಿದೆ.16585 ಎಸ್‌ಎಂವಿಟಿ ಬೆಂಗಳೂರು-ಮುರುಡೇಶ್ವರ, 16586 ಮುರುಡೇಶ್ವರ-ಎಸ್‌ಎಂವಿಟಿ ಬೆಂಗಳೂರು ಮತ್ತು 16516 ಕಾರವಾರ-ಯಶವಂತಪುರ ಸೇವೆಗಳನ್ನು ಶುಕ್ರವಾರ ರದ್ದುಗೊಳಿಸಲಾಗಿದೆ ಎಂದು ನೈಋತ್ಯ ರೈಲ್ವೆ, ಹುಬ್ಬಳ್ಳಿ ಮುಖ್ಯ ಪಿಆರ್‌ಒ ಡಾ.ಮಂಜುನಾಥ್ ಕನಮಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಏತನ್ಮಧ್ಯೆ, ರೈಲು ಸಂಖ್ಯೆ 16515 ಯಶವಂತಪುರ-ಕಾರವಾರ ಹಾಸನ ಮತ್ತು ಕಾರವಾರ ನಡುವೆ ಭಾಗಶಃ ರದ್ದುಗೊಳಿಸಲಾಗಿದೆ ಮತ್ತು ರೈಲು ಸಂಖ್ಯೆ 16576 ಮಂಗಳೂರು ಜೆಎನ್-ಯಶವಂತಪುರ ಸಕಲೇಶಪುರ ಮತ್ತು ಯಶವಂತಪುರ ನಡುವೆ ಶುಕ್ರವಾರ ಭಾಗಶಃ ರದ್ದುಗೊಳಿಸಲಾಗಿದೆ.ರೈಲು ಸಂಖ್ಯೆ 07378 ಮಂಗಳೂರು ಸೆಂಟ್ರಲ್-ವಿಜಯಪುರವನ್ನು ಮಂಗಳೂರು ಜೆಎನ್, ಕಾರವಾರ, ಮಡಗಾಂವ್, ಲೋಂಡಾ ಮತ್ತು ಹುಬ್ಬಳ್ಳಿ ಮೂಲಕ ತಿರುಗಿಸಲಾಯಿತು, ರೈಲು ಸಂಖ್ಯೆ 16595 ಕೆಎಸ್‌ಆರ್ ಬೆಂಗಳೂರು-ಕಾರವಾರವನ್ನು ಅರಸೀಕೆರೆ, ಹುಬ್ಬಳ್ಳಿ, ಲೋಂಡಾ ಮತ್ತು ಮಡಗಾಂವ್ ಮೂಲಕ ತಿರುಗಿಸಲಾಯಿತು, ರೈಲು ಸಂಖ್ಯೆ 16596 ಕರ್ವಾಯಿ-ಕೆಎಸ್‌ಆರ್ ಬೆಂಗಳೂರು ಮಾರ್ಗವಾಗಿ ತಿರುಗಿಸಲಾಯಿತು. , ಲೋಂಡಾ, ಹುಬ್ಬಳ್ಳಿ ಮತ್ತು ಅರಸೀಕೆರೆ, ರೈಲು ಸಂಖ್ಯೆ 16511 ಕೆಎಸ್‌ಆರ್ ಬೆಂಗಳೂರು-ಕಣ್ಣೂರು ಅನ್ನು ಜೋಲಾರ್‌ಪೆಟ್ಟೈ ಎ, ಸೇಲಂ ಮತ್ತು ಶೋರ್ನೂರ್ ಮೂಲಕ ಮತ್ತು ರೈಲು ಸಂಖ್ಯೆ 16512 ಕಣ್ಣೂರು-ಕೆಎಸ್‌ಆರ್ ಬೆಂಗಳೂರು ಶೋರ್ನೂರು, ಸೇಲಂ ಮತ್ತು ಜೋಲಾರ್‌ಪೇಟ್ಟೈ ಎ ಮೂಲಕ ಶುಕ್ರವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ಭೂಕುಸಿತ ಸಂಭವಿಸಿದ ನಂತರ ತಿರುಗಿಸಲಾಯಿತು.ವರಮಹಾಲಕ್ಷ್ಮೀ ಹಬ್ಬಕ್ಕೆ ತೆರಳುತ್ತಿದ್ದ ಪ್ರಯಾಣಿಕರು ರೈಲು ಸಂಚಾರ ಸ್ಥಗಿತವಾಗಿದ್ದರಿಂದ ನೂರಾರು ಪ್ರಯಾಣಿಕರು ಪರದಾಡಿದ್ದಾರೆ. ಘಟನಾ ಸ್ಥಳಕ್ಕೆ ರೈಲ್ವೆ ಇಲಾಖೆ ಸಿಬ್ಬಂದಿ ದೌಡಾಯಿಸಿದ್ದು ಪರಿಶೀಲನೆ ಮಾಡಿದ್ದಾರೆ.ಭೂಕುಸಿತವನ್ನು ತೆರವುಗೊಳಿಸಲು ಮತ್ತು ಟ್ರ್ಯಾಕ್ ಅನ್ನು ಸರಿಪಡಿಸಲು ಹಾನಿಗೊಳಗಾದ ಸ್ಥಳಕ್ಕೆ ಪುನಃಸ್ಥಾಪನೆ ತಂಡಗಳನ್ನು ಕಳುಹಿಸಲಾಗಿದೆ. ಸುರಕ್ಷತೆ ಮತ್ತು ದಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಅಧಿಕೃತ ತಂಡಗಳು ನಿರಂತರವಾಗಿ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿವೆ. ರೈಲು ಸೇವೆಯಲ್ಲಿ ಯಾವುದೇ ಬದಲಾವಣೆಗಳನ್ನು ನಂತರ ತಿಳಿಸಲಾಗುವುದು ಎಂದು ಡಾ ಮಂಜುನಾಥ್ ಹೇಳಿದರು.ಭೂಕುಸಿತ, ರೈಲು ಸೇವೆ ಸ್ಥಗಿತ: ಜುಲೈ 26 ರಂದು ಹಾಸನ ಜಿಲ್ಲೆಯ ಯೆಡಕುಮೇರಿ ಹಾಗೂ ಕಡಗರವಳ್ಳಿ ಭಾಗದಲ್ಲಿ ಭಾರೀ ಪ್ರಮಾಣದಲ್ಲಿ ಭೂಕುಸಿತ ಉಂಟಾಗಿ 12 ರೈಲುಗಳು ರದ್ದುಗೊಂಡಿತ್ತು. ಬಳಿಕ ಇದನ್ನು ಸಮರೋಪಾದಿಯಲ್ಲಿ ಹಗಲು ರಾತ್ರಿ ಶ್ರಮವಹಿಸಿ ರೈಲ್ವೆ ವಲಯವು ಸರಿಪಡಿಸಿತ್ತು. ಆಗಸ್ಟ್‌ 8 ರಿಂದ ಮತ್ತೆ ರೈಲು ಸೇವೆ ಆರಂಭಗೊಂಡಿತ್ತು.