ಕೇಂದ್ರ ಬಜೆಟ್‌ ಪೂರ್ವಭಾವಿ ಸಮಾಲೋಚನಾ ಸಭೆ: ರಾಜ್ಯದ ಪ್ರತಿನಿಧಿಯಾಗಿ ಕೃಷ್ಣ ಬೈರೇಗೌಡ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆಯಲಿರುವ ಬಜೆಟ್ ಪೂರ್ವ ಸಮಾಲೋಚನೆಯಲ್ಲಿ ಭಾಗವಹಿಸಲು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಎಸಿಎಸ್ ಅತೀಕ್ ಅಹಮದ್ ಮತ್ತು ಇತರ ಅಧಿಕಾರಿಗಳೊಂದಿಗೆ ದೆಹಲಿಗೆ ತೆರಳಲಿದ್ದಾರೆ. ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆಯಲಿರುವ ಬಜೆಟ್ ಪೂರ್ವ ಸಮಾಲೋಚನೆಯಲ್ಲಿ ಭಾಗವಹಿಸಲು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಎಸಿಎಸ್ ಅತೀಕ್ ಅಹಮದ್ ಮತ್ತು ಇತರ ಅಧಿಕಾರಿಗಳೊಂದಿಗೆ ದೆಹಲಿಗೆ ತೆರಳಲಿದ್ದಾರೆ.ಜೂನ್ 4 ರಂದು ಆಯ್ಕೆಯಾದ ಹೊಸ ಸರ್ಕಾರವು ಸುಮಾರು ಒಂದು ತಿಂಗಳ ಅವಧಿಯಲ್ಲಿ ಬಜೆಟ್ ಮಂಡಿಸುವ ನಿರೀಕ್ಷೆಯಿದೆ ಮತ್ತು ಮೊದಲ ಪೂರ್ಣ ಕೇಂದ್ರ ಬಜೆಟ್‌ಗೆ ಸಿದ್ಧತೆಗಳು ನಡೆಯುತ್ತಿವೆ ಎಂದು ಮೂಲಗಳು ತಿಳಿಸಿವೆ.ನಾವು ಈಗ ಕಾರ್ಯಸೂಚಿಯನ್ನು ಸಿದ್ಧಪಡಿಸುತ್ತಿದ್ದೇವೆ ಮತ್ತು ನಾಳೆ ಅದನ್ನು ಕ್ಯಾಬಿನೆಟ್‌ನಲ್ಲಿ ಚರ್ಚಿಸಿ ಅಂತಿಮಗೊಳಿಸುತ್ತೇವೆ. ಹಣಕಾಸು ಸಚಿವರೊಂದಿಗೆ ದೆಹಲಿಯಲ್ಲಿ ನಡೆಯುವ ಪೂರ್ವಭಾವಿ ಸಮಾಲೋಚನೆ ಸಭೆಯಲ್ಲಿ ಕರ್ನಾಟಕಕ್ಕೆ ಪ್ರಾಮುಖ್ಯತೆಯ ವಿಷಯಗಳನ್ನು ಪ್ರಸ್ತಾಪಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.ಮೊದಲ ಪೂರ್ವ ಬಜೆಟ್ ಸಮಾಲೋಚನೆಯನ್ನು ಬುಧವಾರ ದೆಹಲಿಯಲ್ಲಿ ನಡೆಸಲಾಯಿತು, ಅಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರಾಷ್ಟ್ರದಾದ್ಯಂತದ ಅರ್ಥಶಾಸ್ತ್ರಜ್ಞರೊಂದಿಗೆ ಸಂವಾದ ನಡೆಸಿ ಅವರ ಪ್ರತಿಕ್ರಿಯೆಯನ್ನು ಸಂಗ್ರಹಿಸಿದರು.ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಕೇಂದ್ರ ಸಚಿವ ನಿರ್ಮಲಾ ಸೀತಾರಾಮನ್ ಅವರು ನವದೆಹಲಿಯಲ್ಲಿ ಮುಂಬರುವ ಸಾಮಾನ್ಯ ಬಜೆಟ್ 2024-25 ಗೆ ಸಂಬಂಧಿಸಿದಂತೆ ಪ್ರಮುಖ ಅರ್ಥಶಾಸ್ತ್ರಜ್ಞರೊಂದಿಗೆ ಮೊದಲ ಪೂರ್ವ-ಬಜೆಟ್ ಸಮಾಲೋಚನೆಯ ಅಧ್ಯಕ್ಷತೆ ವಹಿಸಿದ್ದಾರೆ ಕೇಂದ್ರ ಹಣಕಾಸು ಸಚಿವಾಲಯವು ಬುಧವಾರ ಟ್ವೀಟ್ ಮಾಡಿದೆ.ಈ ಬಜೆಟ್ ಪೂರ್ವ ಸಮಾಲೋಚನೆಗೆ ಹಣಕಾಸು ಖಾತೆ ಹೊಂದಿರುವ ಸಿಎಂ ಸಿದ್ದರಾಮಯ್ಯ ಅವರನ್ನು ಆಹ್ವಾನಿಸಲಾಗಿತ್ತು, ಆದರೆ ಅವರಿಗೆ ಪೂರ್ವ ನಿರ್ಧರಿತ ಸಭೆಗಳಿರುವ ಕಾರಣ ಸಭೆಗೆ ರಾಜರಾಗಲಿಲ್ಲಎಂದು ತಿಳಿದ ಬಂದಿದೆ.