ಸಲ್ಮಾನ್ ಖಾನ್ ಪ್ರಕರಣ: ತೀರ್ಪು ಮೂಂದೂಡಿದ ನ್ಯಾಯಾಲಯ ಕೃಷ್ಣಮೃಗ ಬೇಟೆಯಲ್ಲಿ ಅಕ್ರಮ ಶಸ್ತ್ರಾಸ್ತ್ರ ಹೊಂದಿದ್ದ ಸಲ್ಮಾನ್ ಖಾನ್ ಅವರ ಪ್ರಕರಣದ ತೀರ್ಪನ್ನು ಜೋದ್‌ಪುರ ನ್ಯಾಯಾಲಯವು... ನವದೆಹಲಿ: ಕೃಷ್ಣಮೃಗ ಬೇಟೆಯಲ್ಲಿ ಅಕ್ರಮ ಶಸ್ತ್ರಾಸ್ತ್ರ ಹೊಂದಿದ್ದ ಸಲ್ಮಾನ್ ಖಾನ್ ಅವರ ಪ್ರಕರಣದ ತೀರ್ಪನ್ನು ಜೋದ್‌ಪುರ ನ್ಯಾಯಾಲಯವು ಮಾರ್ಚ್ 3ಕ್ಕೆ ಮುಂದೂಡಿದೆ. ಸಲ್ಮಾನ್ ಖಾನ್ ಅವರ ಕೃಷ್ಣ ಮೃಗ ಬೇಟೆ ಪ್ರಕರಣದ ಭಾಗವಾಗಿದ್ದ ಅಕ್ರಮ ಶಸ್ತ್ರಾಸ್ತ್ರ ಹೊಂದಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೋದ್‌ಪುರ ನ್ಯಾಯಾಲಯ ಇಂದು ತೀರ್ಪು ನೀಡುತ್ತದೆ ಎಂದು ಹೇಳಲಾಗುತ್ತಿತ್ತು. ಆದರೆ ವಿಚಾರಣೆ ನಡೆಸಿದ ನ್ಯಾಯಾಲಯವು ಅಂತಿಮ ತೀರ್ಪನ್ನು ಮಾರ್ಚ್ 3ಕ್ಕೆ ಮುಂದೂಡಿದೆ. ಈ ಹಿಂದೆ ಫೆ.5 ರಂದು ವಾದ ವಿವಾದಗಳನ್ನು ಆಲಿಸಿದ್ದ ಕೋರ್ಟ್ ಫೆ.25 ತೀರ್ಪು ನೀಡುವುದಾಗಿ ಪ್ರಕಟಿಸಿತ್ತು.