ಅಭಿನಂದನಾ ಸಮಾರಂಭ ನಾನು ಆಯೋಜಿಸಿಲ್ಲ, ನನಗೂ ಅದಕ್ಕೂ ಸಂಬಂಧವಿಲ್ಲ: ಸಂಸದ ಕೆ. ಸುಧಾಕರ್ ಸಾರ್ವಜನಿಕವಾಗಿ ಮದ್ಯ ಹಂಚುವುದು ಅಪರಾಧವಾಗಿದ್ದು, ಅಕ್ಷಮ್ಯವಾಗಿದೆ. ನನ್ನ 20 ವರ್ಷಗಳ ರಾಜಕೀಯ ಜೀವನದಲ್ಲಿ ನಾನು ಎಂದಿಗೂ ಮದ್ಯ ವಿತರಿಸಿಲ್ಲ. ನಾನು ಸನ್ಮಾನ ಕಾರ್ಯಕ್ರಮ ಆಯೋಜಿಸಿಲ್ಲ ಎಂದಿದ್ದಾರೆ. ಕೋಲಾರ: ನೆಲಮಂಗಲದಲ್ಲಿ ಭಾನುವಾರ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರಿಗೆ ಕೃತಜ್ಞತಾ ಸಮಾರಂಭದಲ್ಲಿ ಪಾಲ್ಗೊಂಡಿದ್ದವರಿಗೆ ಉಚಿತ ಮಾಂಸಾಹಾರ, ಸಾರಾಯಿ, ಮದ್ಯ ವಿತರಿಸಲಾಯಿತು. ಈ ಘಟನೆಯ ವಿಡಿಯೋ ಕ್ಲಿಪ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸುಧಾಕರ್ ವಿರುದ್ಧ ಟೀಕೆ ವ್ಯಕ್ತವಾಗಿದೆ.ಈ ನಡುವೆ ಸಂಸದ ಸುಧಾಕರ್ ಪ್ರತಿಕ್ರಿಯಿಸಿದ್ದು, ನಾನು ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಿಲ್ಲ ಅಥವಾ ಅದರ ಭಾಗವೂ ಅಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸುಧಾಕರ್, ಸಾರ್ವಜನಿಕವಾಗಿ ಮದ್ಯ ಹಂಚುವುದು ಅಪರಾಧವಾಗಿದ್ದು, ಅಕ್ಷಮ್ಯವಾಗಿದೆ. ನನ್ನ 20 ವರ್ಷಗಳ ರಾಜಕೀಯ ಜೀವನದಲ್ಲಿ ನಾನು ಎಂದಿಗೂ ಮದ್ಯ ವಿತರಿಸಿಲ್ಲ. ನಾನು ಸನ್ಮಾನ ಕಾರ್ಯಕ್ರಮ ಆಯೋಜಿಸಿಲ್ಲ ಎಂದಿದ್ದಾರೆ.ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರ ಆಹ್ವಾನದ ಮೇರೆಗೆ ಪ್ರತಿಪಕ್ಷದ ನಾಯಕ ಆರ್.ಅಶೋಕ ಮತ್ತು ನಾನು ಕಾರ್ಯಕ್ರಮದಲ್ಲಿ ಭಾಗವಹಿಸಿ ಕೆಲ ಸಮಯದ ನಂತರ ವಾಪಸಾದೆವು. ಆ ನಂತರ ಬೆಳವಣಿಗೆಗಳು ನಡೆದಿವೆ ಎಂದರು. ನಾನು ಈ ಬಗ್ಗೆ ಮಾಧ್ಯಮಗಳಿಂದ ತಿಳಿದುಕೊಂಡಿದ್ದೇನೆ, ಆದರೆ ಮದ್ಯವನ್ನು ಯಾರು ವಿತರಿಸಿದರು ಎಂಬುದು ನನಗೆ ತಿಳಿದಿಲ್ಲ. ನಾನು ಸ್ಥಳೀಯ ಮುಖಂಡರನ್ನು ಕರೆದು ಈ ರೀತಿ ಮಾಡಬಾರದಿತ್ತು ಎಂದು ಹೇಳಿದ್ದೇನೆ. ಮುಂದೆ ಇಂತಹ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸುತ್ತೇವೆ ಎಂದರು.