ಅಸ್ಸಾಂ ಸಿಎಂ ಹಿಮಂತ್‌ ವಿರುದ್ಧ ₹10 ಕೋಟಿ ಮಾನನಷ್ಟ ಮೊಕದ್ದಮೆ ಹೂಡಿದ ಕಾಂಗ್ರೆಸ್‌ ಗುವಾಹಟಿ: ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷ ಭೂಪೇನ್ ಕುಮಾರ್ ಬೋರಾ ಅವರು ಗುವಾಹಟಿಯ ಸ್ಥಳೀಯ ನ್ಯಾಯಾಲಯದಲ್ಲಿ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ವಿರುದ್ಧ ₹10 ಕೋಟಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಕಾಂಗ್ರೆಸ್‌ನ ರಾಜ್ಯಾಧ್ಯಕ್ಷರು ಶೀಘ್ರದಲ್ಲೇ ಪಕ್ಷವನ್ನು ತೊರೆಯಲಿದ್ದಾರೆ ಎಂದು ಹಿಮಂತ್‌ ಅವರು ಹೇಳಿಕೆ ನೀಡಿದ್ದರು, ಇದರಿಂದ ತಮ್ಮ ಪ್ರತಿಷ್ಠೆಗೆ ಮತ್ತು ಪಕ್ಷಕ್ಕೆ ಧಕ್ಕೆ ಉಂಟಾಗಿದೆ ಎಂದು ಆರೋಪಿಸಿದ್ದಾರೆ. ಅಲ್ಲದೆ ರಾಜ್ಯದ ಪ್ರಮುಖ ಸ್ಥಳೀಯ ದಿನಪತ್ರಿಕೆ ಮತ್ತು ಅದರ ಸಂಪಾದಕರನ್ನು ಮೊಕದ್ದಮೆಯಲ್ಲಿ ಪ್ರತಿವಾದಿಗಳನ್ನಾಗಿ ಮಾಡಲಾಗಿದೆ. ಮುಂದಿನ ವರ್ಷ ಬೋರಾ ಬಿಜೆಪಿ ಸೇರಲಿದ್ದಾರೆ ಎನ್ನುವ ಹೇಳಿಕೆಯನ್ನು ಅವರು ತಳ್ಳಿಹಾಕಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.