ಗಂಗಾ, ಯಮುನೆಗೆ ಪೂಜೆ: ಮಾಲಿನ್ಯ ನಿಯಂತ್ರಣ ಮಂಡಳಿಗಳ ಪ್ರತಿಕ್ರಿಯೆ ಕೇಳಿದ ನವದೆಹಲಿ: ಗಂಗಾ ಮತ್ತು ಯಮುನಾ ನದಿಗಳಿಗೆ ಪೂಜೆ ಸಲ್ಲಿಸುವ ಕುರಿತು ನಾಲ್ಕು ವಾರಗಳಲ್ಲಿ ತಮ್ಮ ಪ್ರತಿಕ್ರಿಯೆ ಸಲ್ಲಿಸಲು ದೆಹಲಿ ಮಾಲಿನ್ಯ ನಿಯಂತ್ರಣ ಸಮಿತಿ () ಮತ್ತು ಉತ್ತರ ಪ್ರದೇಶ ಮಾಲಿನ್ಯ ನಿಯಂತ್ರಣ ಮಂಡಳಿ ( ) ಗೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ() ಸೂಚನೆ ನೀಡಿದೆ. ಎರಡು ನದಿಗಳ ಘಾಟ್‌ಗಳಲ್ಲಿ ಪಾಲಿಥಿನ್ ಕವರ್‌ಗಳಲ್ಲಿ ಪೂಜೆಗೆ ಅರ್ಪಿಸಿದ ಹೂವುಗಳು ಮತ್ತು ಹೂಮಾಲೆಗಳನ್ನು ಎಸೆದ ಕಾರಣದಿಂದ ಎರಡು ನದಿಗಳಲ್ಲಿ ಮಾಲಿನ್ಯದ ಕುರಿತು ಪತ್ರಿಕೆಯ ವರದಿಯನ್ನು ಸ್ವಯಂ ಪ್ರೇರಿತವಾಗಿ ಸ್ವೀಕರಿಸಿದ ನ್ಯಾಯಮಂಡಳಿಯು ವಿಚಾರಣೆ ನಡೆಸಿತು . ಎನ್‌ಜಿಟಿ ಅಧ್ಯಕ್ಷ ನ್ಯಾಯಮೂರ್ತಿ ಪ್ರಕಾಶ್ ಶ್ರೀವಾಸ್ತವ ಅವರಿದ್ದ ಪೀಠವು ಡಿಪಿಸಿಸಿ ಪರ ವಕೀಲರು ಈ ವಿಷಯದ ಬಗ್ಗೆ ಸಮಿತಿಯ ಪ್ರತಿಕ್ರಿಯೆಯನ್ನು ನೀಡಲು ವಿಫಲರಾಗಿದ್ದಾರೆ ಎಂದು ಹೇಳಿದರು. ನಾಲ್ಕು ವಾರಗಳಲ್ಲಿ ಹೊಸದಾಗಿ ಪ್ರತಿಕ್ರಿಯೆ ನೀಡುವಂತೆ ಪೀಠ ಸೂಚಿಸಿದೆ. ನ್ಯಾಯಾಂಗ ಸದಸ್ಯ ಸುಧೀರ್ ಅಗರವಾಲ್ ಹಾಗೂ ತಜ್ಞ ಸದಸ್ಯ ಸೆಂಥಿಲ್ ಅವರು ಕೂಡ ಈ ಪೀಠದ ಭಾಗವಾಗಿದ್ದಾರೆ. ಮುಂದಿನ ವಿಚಾರಣೆಯನ್ನು ನ್ಯಾಯಮಂಡಳಿ ಜುಲೈ 3ಕ್ಕೆ ಮುಂದೂಡಿತು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.