ಸೋದರತ್ವದ ಬಾಂಧವ್ಯ ಸಾರುವ ರಕ್ಷಾ ಬಂಧನ: ಪ್ರಧಾನಿ, ಸಿಎಂ ಸೇರಿ ಗಣ್ಯರಿಂದ ಶುಭಾಶಯ ಬೆಂಗಳೂರು: ಇಂದು ಎಲ್ಲಡೆ ರಕ್ಷಾ ಬಂಧನ ಹಬ್ಬದ ಸಂಭ್ರಮ ಮನೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಗಣ್ಯರು ಶುಭಾಶಯ ಕೋರಿದ್ದಾರೆ. ‌'ಸಹೋದರ ಹಾಗೂ ಸಹೋದರಿಯರ ನಡುವಿನ ಪ್ರೀತಿಯ ಸಂಕೇತವಾಗಿರುವ ರಕ್ಷಾ ಬಂಧನ ಹಬ್ಬದಂದು ದೇಶದ ಜನತೆಗೆ ಶುಭಾಶಯಗಳು. ಈ ಹಬ್ಬ ನಿಮ್ಮ ಸಂಬಂಧಗಳಲ್ಲಿ ಹೊಸ ಮಾಧುರ್ಯವನ್ನು ತರಲಿ. ನಿಮ್ಮ ಜೀವನದಲ್ಲಿ ಸಂತೋಷ, ಸಮೃದ್ಧಿ ತುಂಬಿರಲಿ' ಎಂದು ಪ್ರಧಾನಿ ನರೇಂದ್ರ ಮೋದಿ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ. समस्त देशवासियों को भाई-बहन के असीम स्नेह के प्रतीक पर्व रक्षाबंधन की ढेरों शुभकामनाएं। यह पावन पर्व आप सभी के रिश्तों में नई मिठास और जीवन में सुख, समृद्धि एवं सौभाग्य लेकर आए। 'ಸಹೋದರ ಸಹೋದರಿಯರ ನಡುವಿನ ಅವಿನಾಭಾವ ಪ್ರೀತಿ ಮತ್ತು ವಾತ್ಸಲ್ಯದ ಹಬ್ಬವಾದ ರಕ್ಷಾಬಂಧನದಂದು ಎಲ್ಲಾ ದೇಶವಾಸಿಗಳಿಗೆ ಶುಭಾಶಯಗಳು' ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ. भाई-बहन के अटूट प्रेम एवं स्नेह के पर्व, रक्षाबंधन की सभी देशवासियों को बहुत-बहुत बधाई और शुभकामनाएं। रक्षा का यह सूत्र आपके इस पावन रिश्ते को सदैव मजबूती के साथ जोड़े रहे। ../Xvsqj2rt4e 'ರಕ್ಷಾ ಬಂಧನದ ಶುಭ ಸಂದರ್ಭದಲ್ಲಿ, ದೇಶದ ಜನತೆಗೆ ಶುಭ ಹಾರೈಸುತ್ತೇನೆ. ಸಹೋದರ ಸಹೋದರಿಯರ ನಡುವಿನ ಪ್ರೀತಿ ಮತ್ತು ಪರಸ್ಪರ ನಂಬಿಕೆಯ ಭಾವನೆಯನ್ನು ಆಧರಿಸಿದ ಈ ಹಬ್ಬವು ಎಲ್ಲಾ ಸಹೋದರಿಯರು ಮತ್ತು ಹೆಣ್ಣುಮಕ್ಕಳ ಬಗ್ಗೆ ಪ್ರೀತಿ ಮತ್ತು ಗೌರವದ ಭಾವನೆಯನ್ನು ಹುಟ್ಟುಹಾಕುತ್ತದೆ. ನಮ್ಮ ಸಮಾಜದಲ್ಲಿನ ಮಹಿಳೆಯರ ಸುರಕ್ಷತೆ ಮತ್ತು ಗೌರವವನ್ನು ಕಾಪಾಡಲು ಈ ಹಬ್ಬದ ದಿನದಂದು, ಎಲ್ಲರೂ ಪ್ರತಿಜ್ಞೆ ಮಾಡಬೇಕು ಎಂದು ನಾನು ಬಯಸುತ್ತೇನೆ' ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ. रक्षा बंधन के पावन अवसर पर, मैं सभी देशवासियों को हार्दिक बधाई और शुभकामनाएं देती हूं। भाई-बहन के बीच प्रेम और आपसी विश्वास की भावना पर आधारित यह त्योहार, सभी बहन-बेटियों के प्रति स्नेह और सम्मान की भावना का संचार करता है। मैं चाहूंगी कि इस पर्व के दिन, सभी देशवासी, हमारे समाज… 'ಸೋದರತೆಯ ಸಂಕೇತವಾದ ರಕ್ಷಾಬಂಧನವು ದ್ವೇಷ, ವೈರುಧ್ಯಗಳನ್ನು ತೊಡೆದು ಪ್ರೀತಿ, ವಿಶ್ವಾಸದ ಬಂಧವು ನಮ್ಮೆಲ್ಲರನ್ನು ಬೆಸೆಯಲು ಪ್ರೇರಣೆಯಾಗಲಿ ಎಂದು ಆಶಿಸುತ್ತೇನೆ. ನಾಡಿನ ಜನತೆಗೆ ರಕ್ಷಾಬಂಧನದ ಶುಭಾಶಯಗಳು' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ. ಸೋದರತೆಯ ಸಂಕೇತವಾದ ರಕ್ಷಾಬಂಧನವು ದ್ವೇಷ, ವೈರುಧ್ಯಗಳನ್ನು ತೊಡೆದು ಪ್ರೀತಿ, ವಿಶ್ವಾಸದ ಬಂಧವು ನಮ್ಮೆಲ್ಲರನ್ನು ಬೆಸೆಯಲು ಪ್ರೇರಣೆಯಾಗಲಿ ಎಂದು ಆಶಿಸುತ್ತೇನೆ. ನಾಡಿನ ಜನತೆಗೆ ರಕ್ಷಾಬಂಧನದ ಶುಭಾಶಯಗಳು. #rakshabandhan2024 # ../KyzqUJpS19 'ಎಲ್ಲ ಸಹೋದರ ಸಹೋದರಿಯರಿಗೆ ರಕ್ಷಾಬಂಧನದ ಶುಭಾಶಯಗಳು. ಭ್ರಾತೃತ್ವದ ಸಂಬಂಧವನ್ನು ಸಂಭ್ರಮಿಸುವ, ಬಾಂಧವ್ಯದ ಪ್ರತೀಕವಾದ ರಕ್ಷಾಬಂಧನ ಎಲ್ಲರ ಬದುಕಿನಲ್ಲಿ ಸಂತಸ ಮೂಡಿಸಲೆಂದು ಹಾರೈಸುತ್ತೇನೆ' ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್‌. ಅಶೋಕ ಹೇಳಿದ್ದಾರೆ. ಎಲ್ಲ ಸಹೋದರ ಸಹೋದರಿಯರಿಗೆ ರಕ್ಷಾಬಂಧನದ ಶುಭಾಶಯಗಳು. ಭ್ರಾತೃತ್ವದ ಸಂಬಂಧವನ್ನು ಸಂಭ್ರಮಿಸುವ, ಬಾಂಧವ್ಯದ ಪ್ರತೀಕವಾದ ರಕ್ಷಾಬಂಧನ ಎಲ್ಲರ ಬದುಕಿನಲ್ಲಿ ಸಂತಸ ಮೂಡಿಸಲೆಂದು ಹಾರೈಸುತ್ತೇನೆ.# ../ ಮರಳು ಕಲಾವಿದ ಸುದರ್ಶನ್ ಪಟ್ನಾಯಕ್ ಅವರು ಒಡಿಶಾದ ಪುರಿಯ ಕಡಲತೀರದಲ್ಲಿ ಸುಂದರವಾದ ಮರಳು ಕಲಾಕೃತಿಯನ್ನು ರಚಿಸಿ ಶುಭಕೋರಿದ್ದಾರೆ. # ''. . . ../f39qV6ktE0 ಶ್ರಾವಣ ಮಾಸದ ಕೊನೆಯ ಸೋಮವಾರದಂದೇ ರಕ್ಷಾ ಬಂಧನ ಹಬ್ಬ ಬಂದಿರುವುದರಿಂದ ಮರಳಿನ ರಾಖಿ ಹಾಗೂ ಶಿವನ ಕಲಾಕೃತಿ ರಚಿಸಿದ್ದಾರೆ. ಇಂದು ಶ್ರಾವಣ ಮಾಸದ ಕೊನೆಯ ಸೋಮವಾರ. ಭಗವಾನ್ ಶಿವ ಎಲ್ಲಾ ಸಹೋದರ ಸಹೋದರಿಯರನ್ನು ಆಶೀರ್ವದಿಸಲಿ ಎಂದು ಅವರು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.