ಎಐಟಿಎ ಪುರುಷರ ಟೆನಿಸ್ ಚಾಂಪಿಯನ್‌ಷಿಪ್ ಇಂದಿನಿಂದ: ಪ್ರಜ್ವಲ್‌ ದೇವ್‌ ಮೇಲೆ ಕಣ್ಣು ಬೆಂಗಳೂರು: ಎಐಟಿಎ ಪುರುಷರ ಟೆನಿಸ್‌ ಚಾಂಪಿಯನ್‌ಷಿಪ್‌, ಇಲ್ಲಿಯ ಪಡುಕೋಣೆ–ದ್ರಾವಿಡ್‌ ಸ್ಪೋರ್ಟ್ಸ್ ಎಕ್ಸ್‌ಲೆನ್ಸ್ ಕೇಂದ್ರದ ಪಿಬಿಐ–ಸಿಎಸ್‌ಇ ಟೆನಿಸ್ ಅಕಾಡೆಮಿಯಲ್ಲಿ ಸೋಮವಾರದಿಂದ ನಡೆಯಲಿದೆ. ಶನಿವಾರ ಮುಕ್ತಾಯಗೊಂಡ ಚಾಂಪಿಯನ್‌ಷಿಪ್‌ನಲ್ಲಿ ಪ್ರಶಸ್ತಿ ವಿಜೇತ ಕರ್ನಾಟಕದ ಪ್ರಜ್ವಲ್ ದೇವ್ ಹಾಗೂ ನಿಕ್ಕಿ ಪೂಣಚ್ಚ ಅವರು ಇಲ್ಲಿಯೂ ಉತ್ತಮ ಸಾಮರ್ಥ್ಯ ಮುಂದುವರಿಸುವ ನಿರೀಕ್ಷೆಯಿದೆ. ದೇಶದಾದ್ಯಂತ 150ಕ್ಕಿಂತ ಹೆಚ್ಚು ಆಟಗಾರರು ಟೂರ್ನಿಯಲ್ಲಿ ಭಾಗವಹಿಸಲಿದ್ದಾರೆ. 24 ಮಂದಿ ಆಟಗಾರರು ನೇರ ಅರ್ಹತೆ ಗಿಟ್ಟಿಸಿದ್ದಾರೆ. ಫಾರ್ಚೂನ್ ಸ್ಪೋರ್ಟ್ಸ್ ಅಕಾಡೆಮಿಯೂ ಸೋಮವಾರದಿಂದ, ಎಐಟಿಎ ಟಿಎಸ್‌7 14 ವರ್ಷದೊಳಗಿನವರ ಟೂರ್ನಿಯನ್ನು ಆಯೋಜಿಸುತ್ತಿದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.