ತಂಡಕ್ಕೆ ಮರಳುವ ಭರವಸೆಯೇ ಇರಲಿಲ್ಲ: ಚಿಂಗ್ಲೆನ್ಸಾನ ಭುವನೇಶ್ವರ : ’ಹಿಮ್ಮಡಿ ನೋವಿನಿಂದ ಬಳಲಿ ಕಂಗಾಲಾಗಿದ್ದಾಗ ತಂಡಕ್ಕೆ ಮರಳುವ ಭರವಸೆಯನ್ನೇ ಕಳೆದುಕೊಂಡಿದ್ದೆ. ಆದರೆ ಈಗ ಖುಷಿಯಾಗಿದೆ’ ಎಂದು ಭಾರತ ಹಾಕಿ ತಂಡದ ಆಟಗಾರ ಚಿಂಗ್ಲೆನ್ಸಾನ ಸಿಂಗ್ ಕಂಗುಜಂ ಅಭಿಪ್ರಾಯಪಟ್ಟರು. ಮಣಿಪುರದ ಈ ಮಿಡ್‌ಫೀಲ್ಡರ್ ಕಳೆದ ವರ್ಷ ನಡೆದಿದ್ದ ರಾಷ್ಟ್ರೀಯ ಹಾಕಿ ಚಾಂಪಿಯನ್‌ಷಿಪ್‌ ವೇಳೆ ಗಾಯಗೊಂಡಿದ್ದರು. ಟೂರ್ನಿಯಲ್ಲಿ ಅವರು ಪ್ರತಿನಿಧಿಸಿದ್ದ ತಂಡ ಪ್ರಶಸ್ತಿ ಗೆದ್ದುಕೊಂಡಿತ್ತು. ‘ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ದಿನಗಳು ಅತ್ಯಂತ ಕಠಿಣವಾಗಿದ್ದವು. ಆ ಸಂದರ್ಭದಲ್ಲಿ ದೇಹದ ಕೆಳಭಾಗಕ್ಕೆ ಹೆಚ್ಚು ಕೆಲಸ ಕೊಡಲು ಸಾಧ್ಯವಾಗದ ಕಾರಣ ತೂಕ ಐದರಿಂದ ಆರು ಕೆಜಿ ಹೆಚ್ಚಾಗಿತ್ತು’ ಎಂದು ಅವರು ಹೇಳಿದರು. 2018ರ ಎಫ್‌ಐಎಚ್‌ ವಿಶ್ವಕಪ್‌ ಟೂರ್ನಿಯಲ್ಲಿ ಅವರು ಕೊನೆಯದಾಗಿ ಭಾರತದ ಜೆರ್ಸಿ ತೊಟ್ಟಿದ್ದರು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.