ಜೂನ್‌ 22ರಿಂದ ಬ್ಯಾಡ್ಮಿಂಟನ್‌ ಟೂರ್ನಿ ಬೆಂಗಳೂರು: ಕೆನರಾ ಯೂನಿಯನ್‌ ಚಾರಿಟೆಬಲ್‌ ಟ್ರಸ್ಟ್‌ ಆಶ್ರಯದ ರಾಮಯ್ಯ ರಾಜನ್‌ ಸ್ಮಾರಕ ರಾಜ್ಯ ರ‍್ಯಾಂಕಿಂಗ್ ಬ್ಯಾಡ್ಮಿಂಟನ್‌ ಟೂರ್ನಿಯು ಜೂನ್‌ 22ರಿಂದ 27ರವರೆಗೆ ಆಯೋಜನೆಯಾಗಿದೆ. ಮಲ್ಲೇಶ್ವರದ ಎಂಟನೇ ಮುಖ್ಯರಸ್ತೆಯಲ್ಲಿರುವ ಪ್ರಕಾಶ್‌ ಕೋರ್ಟ್ಸ್‌ನಲ್ಲಿ ಸಿಂಗಲ್ಸ್‌ ಹಾಗೂ ಡಬಲ್ಸ್‌ ವಿಭಾಗಗಳಲ್ಲಿ ಪಂದ್ಯಗಳು ನಡೆಯಲಿವೆ. 13, 15 ಮತ್ತು 17 ವರ್ಷದೊಳಗಿನ ಬಾಲಕ ಮತ್ತು ಬಾಲಕಿಯರು ಇದರಲ್ಲಿ ಭಾಗವಹಿಸಬಹುದು. ಆಸಕ್ತರು ಜೂನ್ 12ರೊಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 23317980ಗೆ ಸಂಪರ್ಕಿಸಬಹುದು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.