: ಬೆಂಗಳೂರಿನಲ್ಲಿ ಪಿಂಕ್ ಬಾಲ್ ಟೆಸ್ಟ್; ಭಾರತಕ್ಕೆ ಆರಂಭಿಕ ಆಘಾತ ಬೆಂಗಳೂರು: ಇಲ್ಲಿನ ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪ್ರವಾಸಿ ಶ್ರೀಲಂಕಾ ವಿರುದ್ಧ ನಡೆಯುತ್ತಿರುವ ಹೊನಲು ಬೆಳಕಿನ ಟೆಸ್ಟ್ ಪಂದ್ಯದಲ್ಲಿ ಅತಿಥೇಯ ಭಾರತ ಆರಂಭಿಕ ಆಘಾತಕ್ಕೊಳಗಾಗಿದೆ. ಟೀ ವಿರಾಮದ ಹೊತ್ತಿಗೆ 29 ಓವರ್‌ಗಳಲ್ಲಿ ನಾಲ್ಕು ವಿಕೆಟ್ ನಷ್ಟಕ್ಕೆ 93 ರನ್ ಗಳಿಸಿದೆ. ರಿಷಬ್ ಪಂತ್ (16*) ಹಾಗೂ ಶ್ರೇಯಸ್ ಅಯ್ಯರ್ (1) ಕ್ರೀಸಿನಲ್ಲಿದ್ದಾರೆ. ಪಿಂಕ್ ಬಾಲ್ ಟೆಸ್ಟ್ ಪಂದ್ಯದಲ್ಲಿ ಭಾರತಕ್ಕೆ ಆರಂಭದಲ್ಲೇ ಆಘಾತ ಎದುರಾಗಿತ್ತು. ಮಯಂಕ್ ಅಗರವಾಲ್ (4) ರನೌಟ್‌ ಆದರು. ನಾಯಕ ರೋಹಿತ್ ಶರ್ಮಾ (15) ಅವರಿಗೂ ಮಿಂಚಲಾಗಲಿಲ್ಲ. ಹನುಮ ವಿಹಾರಿ ಹಾಗೂ ವಿರಾಟ್ ಕೊಹ್ಲಿ 47 ರನ್‌ಗಳ ಉಪಯುಕ್ತ ಜೊತೆಯಾಟ ಕಟ್ಟಿದರೂ ಟೀ ವಿರಾಮಕ್ಕೆ ಕೆಲವೇ ಹೊತ್ತು ಇರುವಾಗ ಇಬ್ಬರೂ ವಿಕೆಟ್ ಒಪ್ಪಿಸುವ ಮೂಲಕ ನಿರಾಸೆ ಅನುಭವಿಸಿದರು. 🏟️ 👑 ▶️ ://./t74OLq7xoO # | # | @ | @ ../1zXOoimNQe ವಿಹಾರಿ 31 ಹಾಗೂ ಕೊಹ್ಲಿ 23 ರನ್ ಗಳಿಸಿ ಔಟ್ ಆದರು. ಇದರೊಂದಿಗೆ ಕೊಹ್ಲಿಯ 71ನೇ ಟೆಸ್ಟ್ ಶತಕ ಎದುರು ನೋಡುತ್ತಿದ್ದ ಅಭಿಮಾನಿಗಳಿಗೂ ನಿರಾಸೆ ಕಾದಿತ್ತು. ಲಂಕಾ ಪರ ಲಸಿತ್ ಎಂಬುಲದೆನಿಯಾ, ಪ್ರವೀಣ್ ಜಯವಿರ್ಕಮ ಹಾಗೂ ಧನಂಜಯ ಡಿಸಿಲ್ವ ತಲಾ ಒಂದು ವಿಕೆಟನ್ನು ಹಂಚಿಕೊಂಡರು. ಮೊಹಾಲಿಯಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಇನ್ನಿಂಗ್ಸ್ ಗೆಲುವು ದಾಖಲಿಸಿರುವ ಟೀಮ್ ಇಂಡಿಯಾ, ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-0 ಅಂತರದ ಮುನ್ನಡೆ ಕಾಯ್ದುಕೊಂಡಿದ್ದಾರೆ. 😃😁# | # | @ ../IxWXt2DWfN ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.