2021: ಕೆಕೆಆರ್‌ ವಿರುದ್ಧ ಸೋತ ಬಳಿಕ ಭಾವುಕರಾಗಿ ಕಣ್ಣೀರಿಟ್ಟ ಕಿಂಗ್ ಕೊಹ್ಲಿ ಶಾರ್ಜಾ: ಐಪಿಎಲ್ ಟೂರ್ನಿಯ ನಿರ್ಣಾಯಕ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ವಿರುದ್ಧ ಸೋತ ಬಳಿಕ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ನಾಯಕ ವಿರಾಟ್ ಕೊಹ್ಲಿ ಭಾವುಕರಾಗಿ ಕಣ್ಣೀರಿಟ್ಟ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ನಾಯಕನಾಗಿ ಕೊಹ್ಲಿ ಅವರಿಗೆ ಇದು ಕೊನೆಯ ಐಪಿಎಲ್ ಟೂರ್ನಿಯಾಗಿದೆ. ಈ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಳ್ಳುವ ಮೂಲಕ ಕೊಹ್ಲಿ ಅವರಿಗೆ ನಾಯಕತ್ವದಿಂದ ವಿದಾಯ ಹೇಳಬೇಕೆಂದುಕೊಂಡಿದ್ದ ಆರ್‌ಸಿಬಿಗೆ ಕೆಕೆಆರ್‌ನ ಸುನಿಲ್ ನರೈನ್ ಭರ್ಜರಿ ಆಟದ ಮೂಲಕ ಆಘಾತ ನೀಡಿದ್ದರು. 4 ವಿಕೆಟ್ ಗಳಿಸುವ ಮೂಲಕ ಆರ್‌ಸಿಬಿ ಬ್ಯಾಟಿಂಗ್‌ಗೆ ಕಡಿವಾಣ ಹಾಕಿದ್ದ ನರೈನ್ ಬ್ಯಾಟಿಂಗ್‌ನಲ್ಲೂ ಮಿಂಚಿದ್ದರು. ಹ್ಯಾಟ್ರಿಕ್ ಸಿಕ್ಸ್ ಸೇರಿದಂತೆ 26 ರನ್‌ ಗಳಿಸಿ ಆರ್‌ಸಿಬಿ ಗೆಲುವಿಗೆ ತಡೆಯೊಡ್ಡಿದ್ದರು. ಪರಿಣಾಮವಾಗಿ ಕೆಕೆಆರ್ ನಾಲ್ಕು ವಿಕೆಟ್ ಅಂತರದ ರೋಚಕ ಗೆಲುವು ದಾಖಲಿಸಿತ್ತು. ಆರ್‌ಸಿಬಿ ಟೂರ್ನಿಯಿಂದ ಹೊರ ನಡೆಯಬೇಕಾಯಿತು. 💔 🥺# ../Phltz2jQjr ಪಂದ್ಯದ ಬಳಿಕ ಸಹ ಆಟಗಾರರ ಜತೆ ಸೇರಿ ಮಾತನಾಡುತ್ತಿದ್ದ ವೇಳೆ ಭಾವುಕರಾದ ಕೊಹ್ಲಿ ಮೈದಾನದಲ್ಲೇ ಕಣ್ಣೀರಿಟ್ಟು ಅಳುತ್ತಿದ್ದ ದೃಶ್ಯ ಕ್ಯಾಮೆರಾ ಕಣ್ಣಲ್ಲಿ ಸೆರೆಯಾಗಿತ್ತು. ಅದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. 🥺💔# ../55ovNj3Tc9 ಇನ್ನಷ್ಟು... ಐಪಿಎಲ್‌ನ ಕೊನೆಯ ಪಂದ್ಯ ಆಡುವ ವರೆಗೂ ಆರ್‌ಸಿಬಿಯಲ್ಲೇ ಇರುತ್ತೇನೆ: ವಿರಾಟ್ ಕೊಹ್ಲಿ 2021: ವಿರಾಟ್ ನಾಯಕತ್ವದಲ್ಲಿ ಈಡೇರದ ಆರ್‌ಸಿಬಿ ಟ್ರೋಫಿ ಗೆಲ್ಲುವ ಕನಸು , . ! # # # # # ../W6v7tgGYON ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.