ಎನ್‌ಸಿಪಿಗೆ ಏಕನಾಥ್ ಖಾಡ್ಸೆ ಶೀಘ್ರ ಸೇರ್ಪಡೆ : ಜಯಂತ್ ಪಾಟೀಲ್
ಮುಂಬೈ:ಬಿಜೆಪಿಯ ಹಿರಿಯ ನಾಯಕ ಏಕನಾಥ್ ಖಾಡ್ಸೆ ಅವರು ಎನ್‌ಸಿಪಿಗೆ ಸೇರಲಿದ್ದಾರೆ ಎಂದು ಮಹಾರಾಷ್ಟ್ರ ಸಚಿವ,  ರಾಜ್ಯ ಎನ್‌ಸಿಪಿ ಮುಖ್ಯಸ್ಥ ಜಯಂತ್ ಪಾಟೀಲ್ ಬುಧವಾರ ಹೇಳಿದ್ದಾರೆ.
ಖಾಡ್ಸೆ ಶುಕ್ರವಾರ ಎನ್‌ಸಿಪಿಗೆ ಸೇರಲಿದ್ದಾರೆ. ಅವರ ಸೇರ್ಪಡೆ ಎನ್‌ಸಿಪಿಯನ್ನು ಮತ್ತಷ್ಟು ಬಲಪಡಿಸುತ್ತದೆ” ಎಂದು ಪಾಟೀಲ್ ತಿಳಿಸಿದ್ದಾರೆ. ಖಾಡ್ಸೆ ಅವರು ಭ್ರಷ್ಟಾಚಾರದ ಆರೋಪದ ಮೇಲೆ 2016 ರಲ್ಲಿ ಅಂದಿನ ಬಿಜೆಪಿ ಸರ್ಕಾರದ ಸಚಿವ ಸ್ಥಾನಕ್ಕೆ ರಾಜೀ ನಾಮೆ ನೀಡಿದಾಗಿನಿಂದಲೂ ತೆರೆಮರೆಯಲ್ಲಿದ್ದರು.