ಮಹಿಳೆಯ ವಿವಸ್ತ್ರ ಮೆರವಣಿಗೆ ಪ್ರಕರಣ: ಬಿಜೆಪಿಯ 5 ಸದಸ್ಯರ ಸತ್ಯಶೋಧನಾ ಸಮಿತಿ ರಚನೆ
ಮಹಿಳೆಯನ್ನು ಅಮಾನುಷವಾಗಿ ನಡೆಸಿಕೊಂಡ ಘಟನೆ ಖಂಡಿಸಿರುವ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಈ ಸಮಿತಿ ರಚಿಸಿದ್ದಾರೆ.
ಸದಸ್ಯರು ಸ್ಥಳಕ್ಕೆ ಭೇಟಿ ನೀಡಿ ಸತ್ಯಶೋಧನೆ ನಡೆಸಿ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ. ಸಂಸದರಾದ ಅಪ್ರಜಿತಾ ಸಾರಂಗಿ, ಸುನೀತಾ ದುಗ್ಗಲ್​, ಲಾಕೆಟ್​ ಚಟರ್ಜಿ, ರಂಜಿತಾ ಕೋಲಿ, ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಆಶಾ ಲಾಕ್ರಾ ಸಮಿತಿಯ ಸದಸ್ಯರಾಗಿದ್ದಾರೆ.
“ರಾಜ್ಯದಲ್ಲಿ ಕಾಂಗ್ರೆಸ್​ ಅಧಿಕಾರಕ್ಕೆ ಬಂದಾಗಿನಿಂದಲೂ ಇಂತಹ ಘೋರ ಅಪರಾಧಗಳು ನಡೆಯುತ್ತಿವೆ. ವಿಶೇಷವಾಗಿ ಮಹಿಳೆಯರ ವಿರುದ್ಧ ಇಂತಹ ಘಟನೆಗಳು ವರದಿಯಾಗುತ್ತಿವೆ. ಅಪರಾಧಗಳನ್ನು ನಿಭಾಯಿಸುವಲ್ಲಿ ದೇಶದೆಲ್ಲೆಡೆ ಕಾಂಗ್ರೆಸ್​ ಸೋತಿದೆ. ಕಾಂಗ್ರೆಸ್​ ಸರ್ಕಾರಗಳ ಬೇಜವಾಬ್ದಾರಿ ವರ್ತನೆ ಯನ್ನು ಇದು ಬಹಿರಂಗಪಡಿಸುತ್ತದೆ” ಎಂದು ಟೀಕಿಸಿದ್ದಾರೆ.
ಈ ಘಟನೆಯನ್ನು ಖಂಡಿಸಿ ಕರ್ನಾಟಕದ ಬಿಜೆಪಿ ಸಂಸದರು ಸಂಸತ್ ಆವರಣದಲ್ಲಿ ಪ್ರತಿಭಟನೆ ನಡೆಸಿದರು.