ಕಾರ್ಗಿಲ್ ವಿಜಯ್ ದಿವಸ್: ಸೈನಿಕರಿಗೆ ಗೌರವ ಸಲ್ಲಿಸಿದ ಪ್ರಧಾನಿ
ನವದೆಹಲಿ:ದೇಶಾದ್ಯಂತ ಕಾರ್ಗಿಲ್ ವಿಜಯ್ ದಿವಸ್ (  ) ಆಚರಿಸ ಲಾಗುತ್ತಿದೆ.
ಪ್ರಧಾನಿ ನರೇಂದ್ರ ಮೋದಿ ಅವರು 1999 ರ ಕಾರ್ಗಿಲ್ ಯುದ್ಧದಲ್ಲಿ ಪಾಕಿಸ್ತಾನದ ವಿರುದ್ಧ ಭಾರತದ ಗೆಲುವಿಗೆ ಸರ್ವೋಚ್ಚ ತ್ಯಾಗ ಮಾಡಿದ ಸೈನಿಕರಿಗೆ ಗೌರವ ಸಲ್ಲಿಸಿದರು.
ʻಈ ದಿನವು ಭಾರತದ ಅಪ್ರತಿಮ ಯೋಧರ ಶೌರ್ಯವನ್ನು ಮುನ್ನೆಲೆಗೆ ತರುತ್ತದೆ.  ಅವರು ಯಾವಾಗಲೂ ದೇಶದ ಜನರಿಗೆ ಸ್ಫೂರ್ತಿಯ ಮೂಲವಾಗಿ ಉಳಿಯುತ್ತಾರೆ.. ಜೈ ಹಿಂದ್ʼ ಎಂದು ಪ್ರಧಾನಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.