ಜು.3 ರಿಂದ ಕರ್ನಾಟಕ, ತೆಲಂಗಾಣ ಮತ್ತು ಮಹಾರಾಷ್ಟ್ರಕ್ಕೆ ರಾಷ್ಟ್ರಪತಿ ಭೇಟಿ
ನವದೆಹಲಿ:ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜು.3 ರಿಂದ 7 ರವರೆಗೆ ಕರ್ನಾಟಕ, ತೆಲಂಗಾಣ ಮತ್ತು ಮಹಾರಾಷ್ಟ್ರಕ್ಕೆ ಭೇಟಿ ನೀಡಲಿದ್ದಾರೆ.
ಮುರ್ಮು ಜು.3 ರಂದು ಕರ್ನಾಟಕದ ಮುದ್ದೇನಹಳ್ಳಿಯಲ್ಲಿ ಶ್ರೀ ಸತ್ಯಸಾಯಿ ಮಾನವ ಶ್ರೇಷ್ಠತೆಯ ವಿಶ್ವವಿದ್ಯಾಲಯದ ಎರಡನೇ ಘಟಿಕೋತ್ಸವದಲ್ಲಿ ಭಾಗವಹಿಸಲಿದ್ದಾರೆ. ಸಂಜೆ, ಕರ್ನಾಟಕದ ರಾಜಭವನದಲ್ಲಿ ಪಿವಿಟಿಜಿ ಸದಸ್ಯರೊಂದಿಗೆ ಸಂವಾದ ನಡೆಸ ಲಿದ್ದಾರೆ.
ಜು.4ರಂದು ಹೈದರಾಬಾದ್‌ನ ಅಲ್ಲೂರಿ ಸೀತಾರಾಮ ರಾಜು ಅವರ 125 ನೇ ಜನ್ಮ ದಿನಾಚರಣೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತ ನಾಡಲಿದ್ದಾರೆ ಎಂದು ಹೇಳಿಕೆ ತಿಳಿಸಿದೆ.
ಜು.5ರಂದು ರಾಷ್ಟ್ರಪತಿಗಳು ಗೊಂಡ್ವಾನಾ ವಿಶ್ವವಿದ್ಯಾಲಯದ 10 ನೇ ಘಟಿಕೋತ್ಸವ ದಲ್ಲಿ ಮಾತನಾಡಲಿದ್ದಾರೆ. ಅವರು ನಾಗಪುರದ ಕೊರಾಡಿಯಲ್ಲಿರುವ ಭಾರತೀಯ ವಿದ್ಯಾಭವನದಲ್ಲಿ ಸಾಂಸ್ಕೃತಿಕ ಕೇಂದ್ರವನ್ನು ತೆರೆಯಲಿದ್ದಾರೆ.
ಜು.6ರಂದು ರಾಷ್ಟ್ರಪತಿಗಳು ನಾಗಪುರದ ರಾಜಭವನದಲ್ಲಿ  ಸದಸ್ಯರೊಂದಿಗೆ ತೊಡಗಿಸಿಕೊಳ್ಳಲಿದ್ದಾರೆ. ಮುಂಬೈನ ರಾಜಭವನದಲ್ಲಿ ಅವರ ಗೌರವಾರ್ಥವಾಗಿ ಮಹಾರಾಷ್ಟ್ರ ಸರ್ಕಾರ ಪ್ರಾಯೋಜಿತ ಕಾರ್ಯಕ್ರಮವೊಂದರಲ್ಲಿ ಅವರು ಭಾಗ ವಹಿಸಲಿದ್ದಾರೆ ಎಂದು ಹೇಳಿಕೆ ತಿಳಿಸಿದೆ.