ಬಿಬಿಸಿ ಕಚೇರಿ ಮೇಲೆ ಮುಂದುವರಿದ ಐಟಿ ಪರಿಶೋಧನೆ
ಸಾಕ್ಷ್ಯವನ್ನು ಸಂಗ್ರಹಿಸುವ ಕಾರ್ಯದ ಭಾಗವಾಗಿ ಎಲೆಕ್ಟ್ರಾನಿಕ್ ಗ್ಯಾಜೆಟ್ಗಳಿಂದ ಡೇಟಾವನ್ನು ಪಡೆಯಲಾಗುತ್ತಿದೆ ಎಂದು ತೆರಿಗೆ ಅಧಿಕಾರಿಗಳು ತಿಳಿಸಿದ್ದಾರೆ.
ಬಿಬಿಸಿ ವಿರುದ್ಧ ಐ-ಟಿ ಇಲಾಖೆಯ ಕ್ರಮವನ್ನು ವಿರೋಧ ಪಕ್ಷಗಳು ಖಂಡಿಸಿದ್ದು, ಇದನ್ನು “ರಾಜಕೀಯ ಸೇಡು” ಎಂದು ಬಣ್ಣಿಸಿದ್ದಾರೆ. ಆಡಳಿತಾರೂಢ ಬಿಜೆಪಿಯು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಇತ್ತೀಚೆಗೆ ಬಿಡುಗಡೆ ಮಾಡಿದ್ದ ಸಾಕ್ಷ್ಯಚಿತ್ರದ ಬಗ್ಗೆ ಬಿಬಿಸಿ ಯನ್ನು “ವಿಷಪೂರಿತ ವರದಿ” ಎಂದು ಆರೋಪಿಸಿತ್ತು. ಎರಡು ಭಾಗಗಳ ಸಾಕ್ಷ್ಯಚಿತ್ರ “ಇಂಡಿಯಾ: ದಿ ಮೋದಿ ಕ್ವೆಶ್ಚನ್” ನ್ನು ಪ್ರಸಾರ ಮಾಡಿದ ವಾರಗಳ ನಂತರ ಐಟಿ ಇಲಾಖೆ ದಾಳಿ ನಡೆದಿದ್ದು ಇದನ್ನು ಪ್ರತಿಪಕ್ಷಗಳು ಪ್ರಶ್ನಿಸಿದ್ದವು.
ಪ್ರಧಾನಿ ನರೇಂದ್ರ ಮೋದಿಯವರಿಗೆ ಸಂಬಂಧಿಸಿದ 2002ರ ಗೋಧ್ರಾ ಗಲಭೆ ಕುರಿತ ವರದಿಯಾಗಿದ್ದವು.