ಹುತಾತ್ಮ ಪಟ್ಟ ಗಾಂಧಿ ಕುಟುಂಬದ ಏಕಸ್ವಾಮ್ಯವಲ್ಲ: ಉತ್ತರಾಖಂಡ ಸಚಿವ
ತ್ಯಾಗಕ್ಕೂ ಅಪಘಾತಕ್ಕೂ ವ್ಯತ್ಯಾಸವಿದೆ ಎಂದಿದ್ದಾರೆ. ರಾಹುಲ್ ಗಾಂಧಿಯವರ ಬುದ್ಧಿ ವಂತಿಕೆ ಬಗ್ಗೆ ನನಗೆ ಅನುಕಂಪ ಇದೆ. ಹುತಾತ್ಮ ಪಟ್ಟ ಗಾಂಧಿ ಕುಟುಂಬದ ಏಕಸ್ವಾಮ್ಯ ವಲ್ಲ. ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಭಗತ್ ಸಿಂಗ್, ಸಾವರ್ಕರ್, ಚಂದ್ರಶೇಖರ್ ಆಜಾದ್ ಅವರಂಥ ಹಲವು ಮಂದಿ ಹುತಾತ್ಮರಾಗಿದ್ದಾರೆ.
ಗಾಂಧಿ ಕುಟುಂಬದ ಸದಸ್ಯರ ಹತ್ಯೆ ಆಕಸ್ಮಿಕಗಳು. ಇಂಥ ಆಕಸ್ಮಿಕ ಹಾಗೂ ಹುತಾತ್ಮತೆಗೆ ವ್ಯತ್ಯಾಸವಿದೆ” ಎಂದು ಜೋಶಿ ವಿವರಿಸಿ ದ್ದಾರೆ.
ಶಾಂತಿಯುತ ವಾತಾವರಣದಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ಗಾಂಧಿ ಭೇಟಿ ನೀಡಿದ ಕೀರ್ತಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಲ್ಲುತ್ತದೆ. ಇದರ ಶ್ರೇಯಸ್ಸು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಲ್ಲುತ್ತದೆ ಎಂದರು.
 - 