ಭಾರತವು ಚೀನಾಕ್ಕೆ ಶರಣಾಗಬೇಕೆಂದು ಕೈ ನಾಯಕ ಬಯಸುತ್ತಿದ್ದಾರೆ: ಬಿಜೆಪಿ ಆರೋಪ
ದೇಶದಾದ್ಯಂತ ಸಂಚರಿಸುವುದರಿಂದ ಮಾತ್ರ ಭಾರತವನ್ನು ಅರ್ಥಮಾಡಿಕೊಳ್ಳಲು ಸಾಧ್ಯವಿಲ್ಲ. ಭಾರತೀಯತೆಯನ್ನು ಅವರು ಅರ್ಥಮಾಡಿಕೊಳ್ಳಬೇಕು. ಭಾರತದ ಆವಿ ಷ್ಕಾರವು ನಾಲ್ಕು ತಲೆಮಾರುಗಳಿಂದ (ಗಾಂಧಿ ಕುಟುಂಬ) ನಡೆಯುತ್ತಿದೆ ಎಂದು ತ್ರಿವೇದಿ ಅವರು ಜವಾಹರಲಾಲ್ ನೆಹರು ಅವರ ‘ಡಿಸ್ಕವರಿ ಆಫ್ ಇಂಡಿಯಾ’ ಬಗ್ಗೆ ಉಲ್ಲೇಖಿಸಿದರು.
ಸಂದರ್ಶನದಲ್ಲಿ ಗಡಿ ಉದ್ವಿಗ್ನತೆಯ ಕುರಿತು ರಾಹುಲ್ ಗಾಂಧಿಯವರ ಟೀಕೆಗಳನ್ನು ಉಲ್ಲೇ ಖಿಸಿದ ತ್ರಿವೇದಿ, ‘ತಮ್ಮ ಪಕ್ಷದ ಸರ್ಕಾರದ ಅವಧಿಯಲ್ಲಿ ನಡೆದಂತೆಯೇ ಚೀನಾದ ಮುಂದೆ ಭಾರತ ಶರಣಾಗಬೇಕು ಎಂದು ರಾಹುಲ್ ಗಾಂಧಿ ಬಯಸುತ್ತಿದ್ದಾರೆ ಎಂದು ಸ್ಪಷ್ಟಪಡಿಸಿದರು.
 - 