ಠಾಣೆ ಮೇಲೆ ಮುತ್ತಿಗೆ ಪ್ರಕರಣ: 3,000 ಜನರ ವಿರುದ್ಧ ಪ್ರಕರಣ ದಾಖಲು
ಪ್ರತಿಭಟನಾಕಾರರು ನಡೆಸಿದ ಕಲ್ಲು ತೂರಾಟದಲ್ಲಿ ಐದಕ್ಕೂ ಹೆಚ್ಚು ಪೊಲೀಸ್ ವಾಹನ ಗಳಿಗೆ ಹಾನಿಯಾಗಿದ್ದು, ಪೊಲೀಸರು ಕೂಡ ಗಾಯಗೊಂಡಿದ್ದಾರೆ. ಗಾಯಗೊಂಡ ಪೊಲೀಸರನ್ನು ಆಸ್ಪತ್ರೆಗೆ ಸ್ಥಳಾಂತರಿಸಲು ಕರೆದಿದ್ದ ಆಂಬ್ಯುಲೆನ್ಸ್ಗಳನ್ನು ಪ್ರತಿಭಟನಾಕಾರರು ಆರಂಭದಲ್ಲಿ ತಡೆದರು.