ಪಯ್ಯನೂರಿನ ಆರ್‌ಎಸ್‌ಎಸ್‌ ಕಚೇರಿ ಮೇಲೆ ಬಾಂಬ್‌ ದಾಳಿ
ಕಣ್ಣೂರು:ಕೇರಳದ ಕಣ್ಣೂರು ಜಿಲ್ಲೆಯ ಪಯ್ಯನ್ನೂರಿನಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಚೇರಿಯ ಮೇಲೆ ಮಂಗಳವಾರ ಬಾಂಬ್ ದಾಳಿ ನಡೆದಿದೆ.
ದಾಳಿ ವೇಳೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ದಾಳಿಯಿಂದ ಕಟ್ಟಡದ ಕಿಟಕಿ ಗಾಜುಗಳು ಒಡೆದು ಹೋಗಿದೆ. ನಂತರ ಕೂಡಲೇ ಸ್ಥಳಕ್ಕೆ ಭೇಟಿ ನೀಡಿದ ಪಯ್ಯನ್ನೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಧ್ಯರಾತ್ರಿ ಬೈಕ್‍ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಪಯ್ಯನ್ನೂರಿನಲ್ಲಿ ರುವ ರಾಷ್ಟ್ರಭವನ ಎಂಬ ಆರ್‌ಎಸ್‍ಎಸ್ ಕಚೇರಿಯ ಮೇಲೆ ಸ್ಥಳೀಯವಾಗಿ ತಯಾರಿಸಿದ ಬಾಂಬ್ ಎಸೆದಿದ್ದಾರೆ.
ಈ ಹಿಂದೆಯೂ ಈ ಪ್ರದೇಶದಲ್ಲಿ ಪೆಟ್ರೋಲ್ ಬಾಂಬ್ ದಾಳಿ ನಡೆದ ಉದಾಹರಣೆಗಳಿದೆ. ಸೋಮವಾರ ಬಿಜೆಪಿ ಮತ್ತು ಆರ್‌ಎಸ್‍ಎಸ್ ನಡುವೆ ಮಾತಿನ ಚಕಮಕಿ ನಡೆದಿತ್ತು.