&   : ಜಮ್ಮು- ಕಾಶ್ಮೀರ ಚುನಾವಣೆಗೆ ಕಾಂಗ್ರೆಸ್‌ ಪ್ರಣಾಳಿಕೆ ಬಿಡುಗಡೆ; ಅಲ್ಪ ಸಂಖ್ಯಾತ ಆಯೋಗ ಸೇರಿದಂತೆ ಇನ್ನೇನಿವೆ?
ಬೆಂಗಳೂರು:ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯಲಿರುವ ಮುಂಬರುವ ವಿಧಾನಸಭಾ ಚುನಾವಣೆಗೆ (&  ) ಸೋಮವಾರ ಕಾಂಗ್ರೆಸ್ ತನ್ನ ಪ್ರಣಾಳಿಕೆಯನ್ನು ಪ್ರಕಟಿಸಿದೆ.  ‘ಹಾತ್ ಬದ್ಲೇಗಾ ಹಲಾತ್’  ಎಂದು ಅದನ್ನು ಹೆಸರಿಡಲಾಗಿದೆ.  ಎಐಸಿಸಿ ಮುಖ್ಯ ವಕ್ತಾರ ಪವನ್ ಖೇರಾ ಮತ್ತು ಪಿಸಿಸಿ ಅಧ್ಯಕ್ಷ ತಾರಿಕ್ ಹಮೀದ್ ಕರ್ರಾ ಅವರು ಶ್ರೀನಗರದ ಪಕ್ಷದ ಕಚೇರಿಯಲ್ಲಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು. ರೈತರು, ಮಹಿಳೆಯರು ಮತ್ತು ಯುವಕರಿಗೆ ಕಲ್ಯಾಣ ಕ್ರಮಗಳ ಭರವಸೆ ನೀಡಿದೆ.
              ' .✨        ' . ✨:  &    @#../6aTY7gHbEH
ಕಳೆದ 10 ವರ್ಷಗಳಲ್ಲಿ ಕಾಶ್ಮೀರವನ್ನು ಸ್ಮಶಾನವನ್ನಾಗಿ ಮಾಡಲಾಗಿದೆ. ಇದನ್ನು ಗಮನದಲ್ಲಿಟ್ಟುಕೊಂಡು, ನಮ್ಮ ತಂಡಗಳು 22 ಜಿಲ್ಲೆಗಳಿಗೆ ಹೋಗಿ ಯುವಕರು, ಮಹಿಳೆಯರು, ಹಿರಿಯ ನಾಗರಿಕರು ಮತ್ತು ಉದ್ಯಮಿಗಳೊಂದಿಗೆ ಮಾತುಕತೆ ನಡೆಸಿವೆ. ಅವರೆಲ್ಲರೊಂದಿಗೆ ಮಾತನಾಡಿದ ನಂತರ,  ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ಹೊರಹೊಮ್ಮಿದೆ. ಇದು ನಮ್ಮ ಗ್ಯಾರಂಟಿ ಮತ್ತು ನಮ್ಮ ಭರವಸೆ. ನಾವು ಅವೆಲ್ಲವನ್ನೂ ಪೂರೈಸುತ್ತೇವೆ” ಎಂದು ಖೇರಾ ಹೇಳಿದ್ದಾರೆ.
90 ಸದಸ್ಯರ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಗೆ ಸೆಪ್ಟೆಂಬರ್ 18, ಸೆಪ್ಟೆಂಬರ್ 25 ಮತ್ತು ಅಕ್ಟೋಬರ್ 1 ರಂದು ಮೂರು ಹಂತಗಳಲ್ಲಿ ಮತದಾನ ನಡೆಯಲಿದೆ. ಅಕ್ಟೋಬರ್ 8ರಂದು ಫಲಿತಾಂಶ ಹೊರಬೀಳಲಿದೆ. 370 ನೇ ವಿಧಿಯನ್ನು ರದ್ದುಪಡಿಸಿದ ನಂತರ ಮೊದಲ ಬಾರಿಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿವೆ. ಸೀಟು ಹಂಚಿಕೆ ಒಪ್ಪಂದದ ಪ್ರಕಾರ, ಎನ್ಸಿ 51 ಸ್ಥಾನಗಳಲ್ಲಿ ಸ್ಪರ್ಧಿಸಲಿದ್ದು, ಕಾಂಗ್ರೆಸ್ 32 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ.
ಈ ಸುದ್ದಿಯನ್ನೂ ಓದಿ:  : ಮಂಗಳವಾರ  ಲೆಫ್ಟಿನೆಂಟ್‌ ಗವರ್ನರ್‌ ಭೇಟಿ ಮಾಡಲಿರುವ ಕೇಜ್ರಿವಾಲ್‌; ರಾಜೀನಾಮೆ ಸಾಧ್ಯತೆ