ಜಲಿಯನ್ ಹತ್ಯಾಕಾಂಡ ಹುತಾತ್ಮರ ಧೈರ್ಯ, ತ್ಯಾಗ ಸ್ಫೂರ್ತಿದಾಯಕ: ಪ್ರಧಾನಿ ಮೋದಿ
ನವದೆಹಲಿ:ಜಲಿಯನ್ ವಾಲಾ ಬಾಗ್ ಹತ್ಯಾಕಾಂಡ(1919)ದ ಕರಾಳ ದಿನಾಚರಣೆ ಹಿನ್ನೆಲೆಯಲ್ಲಿ ಹುತಾತ್ಮರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಗೌರವ ಸಲ್ಲಿಸಿ, ಹುತಾತ್ಮರ ಧೈರ್ಯ ಮತ್ತು ತ್ಯಾಗ ಮುಂದಿನ ಪೀಳಿಗೆಗೆ ಸ್ಫೂರ್ತಿದಾಯಕ ಎಂದು ಪ್ರಧಾನಿ ಹೇಳಿದರು.
ಕಳೆದ ವರ್ಷ ನವೀಕರಣಗೊಂಡ ಜಲಿಯನ್ ವಾಲಾ ಬಾಗ್ ಸ್ಮಾರಕದ ಉದ್ಘಾಟನೆ ವೇಳೆ ಮಾಡಿದ ಭಾಷಣದ ಯೂಟ್ಯೂಬ್ ಲಿಂಕ್ ಅನ್ನು ಟ್ವೀಟ್ ನಲ್ಲಿ ಪ್ರಧಾನಿ ಮೋದಿ ಹಂಚಿಕೊಂಡಿದ್ದಾರೆ.
1919ರ ಏಪ್ರಿಲ್ 13ರಂದು ಪಂಜಾಬ್ ನ ಅಮೃತ್ ಸರದಲ್ಲಿರುವ ಜಲಿಯನ್ ವಾಲಾ ಬಾಗ್ ನಲ್ಲಿ ಅಂದಿನ ಬ್ರಿಟಿಷರ ರೌಲಟ್ ಕಾಯ್ದೆಯನ್ನು ವಿರೋಧಿಸಿ ಸಾವಿರಾರು ಮಂದಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದರು. ಈ ಸಂದರ್ಭದಲ್ಲಿ ಬ್ರಿಟಿಷ್ ಪಡೆಗಳು ಏಕಾಏಕಿ ಪ್ರತಿಭಟನಾಕಾರರ ಮೇಲೆ ಗುಂಡಿನ ದಾಳಿ ನಡೆಸುವ ಮೂಲಕ ಸಾವಿರಾರು ಸ್ವಾತಂತ್ರ್ಯ ಹೋರಾಟಗಾರರ ಮಾರಣಹೋಮ ನಡೆಸಿತ್ತು.