  : ವೈದ್ಯರ ಪ್ರತಿಭಟನೆಯಿಂದ 23 ರೋಗಿಗಳು ಸಾವು; ಸುಪ್ರೀಂಕೋರ್ಟ್‌ಗೆ ಕಪಿಲ್‌ ಸಿಬಲ್‌ ಮಾಹಿತಿ
ನವದೆಹಲಿ: ಕೋಲ್ಕತ್ತಾದ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ(  )ಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌( ) ನಲ್ಲಿ ಇಂದು ವಿಚಾರಣೆ ಆರಂಭವಾಗಿದೆ. ಪಶ್ಚಿಮ ಬಂಗಾಳ ಸರ್ಕಾರ( ) ಪರ ಹಿರಿಯ ವಕೀಲ ಕಪಿಲ್‌ ಸಿಬಲ್‌( ) ವಾದ ಮಂಡಿಸಿದ್ದಾರೆ.
ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಇದ್ದ ನ್ಯಾಯಪೀಠ ವಿಚಾರಣೆ ಕೈಗೆತ್ತಿಕೊಂಡಿದ್ದು, ಆರೋಗ್ಯ ಇಲಾಖೆಯ ಸವಿಸ್ತಾರವಾದ ವರದಿಯೊಂದನ್ನು ಕೋರ್ಟ್‌ಗೆ ಸಲ್ಲಿಸಿದ್ದು, ಅತ್ಯಾಚಾರ ಕೊಲೆ ಪ್ರಕರಣವನ್ನು ಖಂಡಿಸಿ ರಾಜ್ಯವ್ಯಾಪಿ ವೈದ್ಯರು ಕೈಗೊಂಡಿದ್ದ ಪ್ರತಿಭಟನೆಯಿಂದ ಸುಮಾರು 23ಜನ ಮೃತಪಟ್ಟಿದ್ದಾರೆ ಎಂದು ಅವರು ತಿಳಿಸಿದ್ದಾರೆ. ವೈದ್ಯರ ಪ್ರತಿಭಟನೆಯಿಂದಾಗಿ ರೋಗಿಗಳಿಗೆ ಸಕಾಲಕ್ಕೆ ಚಿಕಿತ್ಸೆ ಸಿಗದೇ ಪ್ರಾಣಬಿಟ್ಟಿದ್ದಾರೆ. ಹಲವಾರು ರೋಗಿಗಳು ಚಿಕಿತ್ಸೆಗಾಗಿ ಪರದಾಡಿದ್ಧಾರೆ ಎಂದು ಅವರು ದೂರಿದ್ದಾರೆ.
ಏತನ್ಮಧ್ಯೆ, ಕೋಲ್ಕತ್ತಾದ ಆರ್‌ಜಿ ಕರ್ ಆಸ್ಪತ್ರೆಯಲ್ಲಿ ಅತ್ಯಾಚಾರ ಮತ್ತು ಹತ್ಯೆಗೀಡಾದ ಟ್ರೈನಿ ವೈದ್ಯರಿಗೆ ನ್ಯಾಯಕ್ಕಾಗಿ ಒತ್ತಾಯಿಸಿ ಭಾರತೀಯ ವಲಸೆಗಾರರು 25 ದೇಶಗಳ 130 ನಗರಗಳಲ್ಲಿ ಭಾನುವಾರ ಪ್ರತಿಭಟನೆಗಳನ್ನು ಆಯೋಜಿಸಿದರು. ಅಲ್ಲದೆ, ಆಗಸ್ಟ್ 9 ರಂದು ನಡೆದ ಭೀಕರ ಘಟನೆಯ ಒಂದು ತಿಂಗಳನ್ನು ಗುರುತಿಸಲು ಸಾವಿರಾರು ಜನರು ಮಧ್ಯರಾತ್ರಿ ಕೋಲ್ಕತ್ತಾದಲ್ಲಿ ಬೀದಿಗಿಳಿದರು. ಪ್ರತಿಭಟನಾಕಾರರು ಮಾನವ ಸರಪಳಿಗಳನ್ನು ನಿರ್ಮಿಸಿದರು ಮತ್ತು ಮೂರನೇ ‘ರಾತ್ರಿಯನ್ನು ಮರುಪಡೆಯಿರಿ’ ಪ್ರತಿಭಟನಾ ಮೆರವಣಿಗೆಯಲ್ಲಿ ಸಂತ್ರಸ್ತರಿಗೆ ನ್ಯಾಯಕ್ಕಾಗಿ ಒತ್ತಾಯಿಸಿದರು.
ಏನಿದು ಘಟನೆ?
ಪಶ್ಚಿಮ ಬಂಗಾಳದ ಕೋಲ್ಕತಾದಲ್ಲಿನ ಸರ್ಕಾರಿ ಸ್ವಾಮ್ಯದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ಆಗಸ್ಟ್‌ 9ರಂದು ಟ್ರೈನಿ ವೈದ್ಯೆಯ ಶವ ಪತ್ತೆಯಾಗಿತ್ತು. ಎರಡನೇ ವರ್ಷದ ಸ್ನಾತಕೋತ್ತರ ವೈದ್ಯಕೀಯ ಪದವಿ ವಿದ್ಯಾರ್ಥಿಯಾಗಿದ್ದ ಆಕೆ, ಆಗಸ್ಟ್‌ 8ರ ರಾತ್ರಿ ತಡವಾಗಿ ಊಟ ಮುಗಿಸಿ ಕ್ಯಾಂಪಸ್‌ನ ಮೂರನೇ ಮಹಡಿಯಲ್ಲಿನ ಸೆಮಿನಾರ್ ಹಾಲ್‌ಗೆ ಓದುವ ಸಲುವಾಗಿ ತೆರಳಿದ್ದರು. ಮರುದಿನ ಬೆಳಿಗ್ಗೆ ಅವರ ಶವ ಪತ್ತೆಯಾಗಿತ್ತು. ಮರಣೋತ್ತರ ಪರೀಕ್ಷೆಯಲ್ಲಿ ವೈದ್ಯೆಯ ಮೇಲೆ ಅತ್ಯಾಚಾರ ಎಸಗಿ ಕ್ರೂರವಾಗಿ ಹತ್ಯೆಗೈದಿರುವುದು ಬೆಳಕಿಗೆ ಬಂದಿತ್ತು. ಕುತ್ತಿಗೆ ಮುರಿದ ಸ್ಥಿತಿಯಲ್ಲಿ ಕಂಡು ಬಂದಿತ್ತು. ಈ ಪ್ರಕರಣ ದೇಶಾದ್ಯಂತ ಸಂಚಲನ ಸೃಷ್ಟಿಸಿದೆ. ಇನ್ನು ವೈದ್ಯೆ ಕೊಲೆ ಪ್ರಕರಣದ ತನಿಖೆ ನಡೆಸಲು ಸುಪ್ರೀಂಕೋರ್ಟ್‌ ರಾಷ್ಟ್ರೀಯ ಕಾರ್ಯಪಡೆಯನ್ನು ನೇಮಕ ಮಾಡಿದೆ. ಈ ಕಾರ್ಯಪಡೆಯಲ್ಲಿ ಸರ್ಜನ್‌ ವೈಸ್‌ ಅಡ್ಮಿರಲ್‌ ಆರ್‌.ಕೆ. ಸರಿನ್‌, ಏಷ್ಯನ್ ಇನ್ಸ್ಟಿಟ್ಯೂಟ್ ಆಫ್ ನ್ಯಾಷನಲ್ ಗ್ಯಾಸ್ಟ್ರೋಲಜಿ ವ್ಯವಸ್ಥಾಪಕ ನಿರ್ದೇಶಕ ಡಾ. ನಾಗೇಶ್ವರ ರೆಡ್ಡಿ ಇದ್ದಾರೆ.
ಈ ಸುದ್ದಿಯನ್ನೂ ಓದಿ:  : ಕೋಲ್ಕತ್ತಾ ಆರ್‌.ಜಿ.ಕರ್‌ ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ನಿವಾಸದ ಮನೆ ಮೇಲೆ ಇಡಿ ದಾಳಿ