 : ಅಗ್ಗದ ದರದಲ್ಲಿ ವಿದ್ಯುತ್ ಉತ್ಪಾದಿಸುತ್ತಿದೆ ಭಾರತ; ಸೌರ ವಿದ್ಯುತ್ ಸ್ಥಾವರಗಳಿಗೆ ಶೇ.76ರಷ್ಟು ಸುಂಕ ಇಳಿಕೆ
ನವದೆಹಲಿ:ಭಾರತ ಇಂದು ಅಗ್ಗದ ದರದಲ್ಲಿ ವಿದ್ಯುತ್ ಉತ್ಪಾದನೆ ಮಾಡುತ್ತಿದೆ ಎಂದು ಕೇಂದ್ರ ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ್‌ ಜೋಶಿ ( ) ತಿಳಿಸಿದರು. ನವದೆಹಲಿಯಲ್ಲಿ ಹನಿವೆಲ್ ಮತ್ತು -TV18 ಆಯೋಜಿಸಿದ್ದ ಭಾರತ ಶಕ್ತಿ ಪರಿವರ್ತನಾ ಶೃಂಗಸಭೆ ಉದ್ದೇಶಿಸಿ ಅವರು ಮಾತನಾಡಿದರು.
ಜಾಗತಿಕವಾಗಿ ಇಂಧನ ಕ್ಷೇತ್ರದಲ್ಲಿ ಶುದ್ಧ ಮತ್ತು ಸುಸ್ಥಿರ ಇಂಧನಕ್ಕಾಗಿ ಭಾರತ ಪ್ರಭಾವಶಾಲಿ ಹೆಜ್ಜೆ ಇರಿಸಿದೆ. ಆರ್ಥಿಕತೆ ಜತೆಗೆ ಪರಿಸರ ಕಾಳಜಿ, ನಿರ್ವಹಣೆಗೆ ಮಹತ್ವ ನೀಡಿದೆ ಎಂದು ಹೇಳಿದರು.
ಸೌರ ವಿದ್ಯುತ್ ಉತ್ಪಾದನೆಗೆ ಉತ್ತೇಜನ ನೀಡಲೆಂದು ಭಾರತ ಸರ್ಕಾರ ಗ್ರಿಡ್ ಸಂಪರ್ಕಿತ ಸೌರ ವಿದ್ಯುತ್ ಸ್ಥಾವರಗಳಿಗೆ ಇದ್ದ ಸುಂಕವನ್ನು ಶೇ.76ರಷ್ಟು ಇಳಿಸಿದೆ. 2010-11ರಲ್ಲಿ ರೂ.10.95 ಇದ್ದ ಸುಂಕ 2023-24 ರ ಅವಧಿಯಲ್ಲಿ ಕೇವಲ ರೂ.2.60 ಗೆ ಇಳಿಸಲಾಗಿದೆ ಎಂದು ಜೋಶಿ ತಿಳಿಸಿದರು.
ಈ ಸುದ್ದಿಯನ್ನೂ ಓದಿ |  : ಮಗನ ಸಿನಿ “ರೈಡ್” ಗೆ ಅಪ್ಪನ ಸಾಥ್; ಚಿತ್ರದ ಹಾಡು, ಟ್ರೇಲರ್ ರಿಲೀಸ್‌
ನವೀಕರಿಸಬಹುದಾದ ಇಂಧನ ಕ್ಷೇತ್ರ ಭಾರತೀಯ ಆರ್ಥಿಕತೆಯನ್ನು ಮತ್ತಷ್ಟು ಹೆಚ್ಚಿಸುತ್ತದೆ. ಭಾರತದ ತ್ವರಿತ ಬೆಳವಣಿಗೆ ಮತ್ತು ಆರ್ಥಿಕತೆ ಮೇಲೆ ಧನಾತ್ಮಕ ಪ್ರಭಾವ ಬೀರಲಿದೆ. ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಭಾರತ ಒಂದು ಸ್ಪರ್ಧಾತ್ಮಕ ಉದ್ಯಮವನ್ನೇ ಸೃಷ್ಟಿಸಲಿದೆ. ಅಷ್ಟರ ಮಟ್ಟಿಗೆ ಸದೃಢವಾಗಿದೆ. ಭಾರತದಲ್ಲಿ ಸೌರಶಕ್ತಿಯ ವೆಚ್ಚ ವಿಶ್ವದಲ್ಲೇ ಅತ್ಯಂತ ಅಗ್ಗವಾಗಿದೆ ಎಂದು ಅವರು ತಿಳಿಸಿದರು.
ಹೆಚ್ಚುವರಿ ವಿದ್ಯುಚ್ಛಕ್ತಿ ಸಂಗ್ರಹಿಸಲು ಯೋಜಿಸಿದ್ದು, ದೊಡ್ಡ ಪ್ರಮಾಣದ ಗ್ರಿಡ್ ಸಂಗ್ರಹಣೆಯಲ್ಲಿ ಯಶಸ್ಸು ಅತ್ಯಗತ್ಯ. ಇದಕ್ಕಾಗಿ  ಯೋಜನೆಗಳ ಅಭಿವೃದ್ಧಿಗೆ ವೇಗ ನೀಡಲಾಗುತ್ತಿದೆ. 24,000 ಕೋಟಿ ರೂ. ವೆಚ್ಚದಲ್ಲಿ ಹೆಚ್ಚಿನ ದಕ್ಷತೆಯ ಸೌರ  ಮಾದರಿ ಘಟಕಕ್ಕೆ  ಯೋಜನೆ ಜಾರಿಗೊಳಿಸುತ್ತಿದ್ದು, ಈ ಯೋಜನೆಯಡಿ 48,337  ಸಾಮರ್ಥ್ಯದ ಉನ್ನತ-ದಕ್ಷತೆಯ ಸೌರ  ಮಾದರಿಗಳನ್ನು ಸ್ಥಾಪಿಸಲು ಅನುಮತಿ ನೀಡಲಾಗಿದೆ ಎಂದು ಹೇಳಿದರು.
ಭಾರತದ ನವೀಕರಿಸಬಹುದಾದ ಇಂಧನ ಸಾಮರ್ಥ್ಯ 10 ವರ್ಷಗಳಲ್ಲಿ 75.52  ನಿಂದ 203  ಗಿಂತ ಹೆಚ್ಚಾಗಿದೆ. 165 ಪ್ರತಿಶತದಷ್ಟು ಹೆಚ್ಚಳ ಕಂಡಿದೆ. ಭಾರತದಲ್ಲಿ ಒಟ್ಟು ಆರ್‌ಇ ಉತ್ಪಾದನೆಯು 193.50 ಬಿಲಿಯನ್ ಯುನಿಟ್‌ಗಳಿಂದ 2023-24ರಲ್ಲಿ 360 ಬಿಲಿಯನ್ ಯುನಿಟ್‌ಗೆ ಏರಿಕೆಯಾಗಿದೆ, ಇದು ಶೇ.86ರಷ್ಟು ಹೆಚ್ಚಳವಾಗಿದೆ ಎಂದು ವಿವರಿಸಿದರು.
ಈ ಸುದ್ದಿಯನ್ನೂ ಓದಿ | : ನಮೀಬಿಯಾದ 700ಕ್ಕೂ ಅಧಿಕ ವನ್ಯಜೀವಿಗಳ ಸಂರಕ್ಷಣೆಗೆ ಮುಂದಾದ ಅನಂತ್ ಅಂಬಾನಿ!
ತಾವು ನವೀಕರಿಸಬಹುದಾದ ಇಂಧನ ಖಾತೆ ವಹಿಸಿಕೊಂಡ ಮೇಲೆ ಪ್ರಧಾನಮಂತ್ರಿ ಸೂರ್ಯ ಘರ್ ಮುಫ್ತ್ ಬಿಜ್ಲಿ ಯೋಜನೆ ಅಡಿಯಲ್ಲಿ 2.5 ಲಕ್ಷಕ್ಕೂ ಹೆಚ್ಚು ಛಾವಣಿ ಸೌರ ಘಟಕಗಳನ್ನು ಸ್ಥಾಪಿಸಲಾಗಿದೆ. ಒಟ್ಟು 3.28 ಲಕ್ಷ ಅಳವಡಿಕೆಗಳ ಪೈಕಿ ಶೇ.75ಕ್ಕೂ ಹೆಚ್ಚು ಈ ಮೂರು ತಿಂಗಳಲ್ಲಿ ಆಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದರು.